<p><strong>ಕೆಂಭಾವಿ:</strong>ಹಲವು ವರ್ಷಗಳಿಂದ ಕೋಮಾ ಸ್ಥಿತಿಗೆ ತಲುಪಿದ್ದ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಅಂಬುಲೆನ್ಸ್ ಶುಕ್ರವಾರ ಇಲಾಖೆಯ ಮತ್ತೊಂದು (ನಗುಮಗು) ಅಂಬುಲೆನ್ಸ್ ಮೂಲಕ ಯಾದಗಿರಿ ನಗರದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಾರ್ಯಾಲಯಕ್ಕೆ ಕೊಂಡೊಯ್ಯಲಾಯಿತು.</p>.<p>ಸಮುದಾಯ ಆರೋಗ್ಯ ಕೇಂದ್ರವಾಗಿ ಹಲವು ವರ್ಷಗಳೇ ಗತಿಸಿದರೂ ಇಲ್ಲಿ ಕೆಲವು ದಿನಗಳು ಮಾತ್ರ ಹೊಸದಾಗಿ ಆಗಮಿಸಿದ ಅಂಬುಲೆನ್ಸ್ ಸೇವೆ ರೋಗಿಗಳ ಸೇವೆಗೆ ಸಿದ್ಧವಾಗಿತ್ತು. ಆದರೆ ದುರದೃಷ್ಟವಶಾತ್ ಅದರ ಚಾಲಕ ಬಸವರಾಜ ಕಕ್ಕೇರಾ ಎಂಬುವರು ಕಳೆದ ಮೂರು ವರ್ಷಗಳ ಹಿಂದೆ ನಿಧನ ನಂತರ ಈ ವಾಹನ ಕೆಟ್ಟು ನಿಂತಿವೆ.</p>.<p>ಈ ಕುರಿತು ಪತ್ರಿಕೆ ಹಲವು ಬಾರಿ ವರದಿ ಮಾಡಿತ್ತು. 3 ವರ್ಷಗಳ ನಂತರ ಎಚ್ಚೆತ್ತುಕೊಂಡಿರುವ ಜಿಲ್ಲಾಮಟ್ಟದ ಅಧಿಕಾರಿಗಳು ಶುಕ್ರವಾರ ಸಂಪೂರ್ಣ ಕೆಟ್ಟು ನಿಂತಿರುವ ಅಂಬುಲೆನ್ಸ್ ಎಳೆದು ತರುವಂತೆ ಸರ್ಕಾರದ ಮತ್ತೊಂದು ಅಂಬುಲೆನ್ಸ್ ನಗುಮಗುವಿಗೆ ನಿರ್ದೇಶನ ನೀಡಿದ್ದ ಹಿನ್ನೆಲೆಯಲ್ಲಿ ಟೋಚನ್ ಮೂಲಕ ಜಿಲ್ಲಾ ಕೇಂದ್ರಕ್ಕೆ ಕಳಿಸಿ ಕೊಡಲಾಗಿದೆ ಎಂದು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong>ಹಲವು ವರ್ಷಗಳಿಂದ ಕೋಮಾ ಸ್ಥಿತಿಗೆ ತಲುಪಿದ್ದ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಅಂಬುಲೆನ್ಸ್ ಶುಕ್ರವಾರ ಇಲಾಖೆಯ ಮತ್ತೊಂದು (ನಗುಮಗು) ಅಂಬುಲೆನ್ಸ್ ಮೂಲಕ ಯಾದಗಿರಿ ನಗರದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಾರ್ಯಾಲಯಕ್ಕೆ ಕೊಂಡೊಯ್ಯಲಾಯಿತು.</p>.<p>ಸಮುದಾಯ ಆರೋಗ್ಯ ಕೇಂದ್ರವಾಗಿ ಹಲವು ವರ್ಷಗಳೇ ಗತಿಸಿದರೂ ಇಲ್ಲಿ ಕೆಲವು ದಿನಗಳು ಮಾತ್ರ ಹೊಸದಾಗಿ ಆಗಮಿಸಿದ ಅಂಬುಲೆನ್ಸ್ ಸೇವೆ ರೋಗಿಗಳ ಸೇವೆಗೆ ಸಿದ್ಧವಾಗಿತ್ತು. ಆದರೆ ದುರದೃಷ್ಟವಶಾತ್ ಅದರ ಚಾಲಕ ಬಸವರಾಜ ಕಕ್ಕೇರಾ ಎಂಬುವರು ಕಳೆದ ಮೂರು ವರ್ಷಗಳ ಹಿಂದೆ ನಿಧನ ನಂತರ ಈ ವಾಹನ ಕೆಟ್ಟು ನಿಂತಿವೆ.</p>.<p>ಈ ಕುರಿತು ಪತ್ರಿಕೆ ಹಲವು ಬಾರಿ ವರದಿ ಮಾಡಿತ್ತು. 3 ವರ್ಷಗಳ ನಂತರ ಎಚ್ಚೆತ್ತುಕೊಂಡಿರುವ ಜಿಲ್ಲಾಮಟ್ಟದ ಅಧಿಕಾರಿಗಳು ಶುಕ್ರವಾರ ಸಂಪೂರ್ಣ ಕೆಟ್ಟು ನಿಂತಿರುವ ಅಂಬುಲೆನ್ಸ್ ಎಳೆದು ತರುವಂತೆ ಸರ್ಕಾರದ ಮತ್ತೊಂದು ಅಂಬುಲೆನ್ಸ್ ನಗುಮಗುವಿಗೆ ನಿರ್ದೇಶನ ನೀಡಿದ್ದ ಹಿನ್ನೆಲೆಯಲ್ಲಿ ಟೋಚನ್ ಮೂಲಕ ಜಿಲ್ಲಾ ಕೇಂದ್ರಕ್ಕೆ ಕಳಿಸಿ ಕೊಡಲಾಗಿದೆ ಎಂದು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>