ಇದಕ್ಕೆ ತಾಜಾ ಉದಾಹರಣೆ ಎನ್ನುವಂತೆ ಭಾನುವಾರ ತಾಲ್ಲೂಕಿನ ಚಾಮನಾಳ ಗ್ರಾಮದಿಂದ ಅಕ್ರಮವಾಗಿ 25 ಕ್ವಿಂಟಲ್ ಅಕ್ಕಿಯನ್ನು ಸಾಗಣೆ ಮಾಡುತ್ತಿರುವುದನ್ನು ಜಿಲ್ಲಾ ಪೊಲೀಸ್ ಜಾಗೃತ ದಳ ಪತ್ತೆ ಮಾಡಿ ಜಪ್ತಿ ಮಾಡಿಕೊಂಡಿತ್ತು. ಪೊಲೀಸರು ಸಹ ವಾಹನದ ಚಾಲಕ ಮತ್ತು ಮಾಲೀಕನ ಮೇಲೆ ದೂರು ದಾಖಲಿಸಿಕೊಂಡು ಕೈ ತೊಳೆದುಕೊಳ್ಳುತ್ತಾರೆ. ಆದರೆ ಜಾಲದ ಹಿಂದಿರುವ ಕೈಗಳನ್ನು ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳಲು ಮುತುವರ್ಜಿ ವಹಿಸುತ್ತಿಲ್ಲ. ಇದು ಅಕ್ರಮವಾಗಿ ಮಾರಾಟ ಸಾಗಣೆಗೆ ಕುಮ್ಮಕ್ಕು ನೀಡಿದಂತೆ ಆಗುತ್ತಿದೆ ಎನ್ನುತ್ತಾರೆ ರೈತ ಶರಣಪ್ಪ.