ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೊರೋನಾ ವಾರಿಯರ್ಸ್‘ ಘೋಷಿಸಲು ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಯಿಂದ ಮನವಿ

ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಯಿಂದ ಮನವಿ
Last Updated 9 ಜುಲೈ 2020, 16:49 IST
ಅಕ್ಷರ ಗಾತ್ರ

ಯಾದಗಿರಿ: ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಸರ್ಕಾರ ಕೊರೊನಾ ವಾರಿಯರ್ಸ್ ಎಂದು ಘೋಷಿಸಬೇಕೆಂದು ಒತ್ತಾಯಿಸಿ ನೌಕರರು ಗುರುವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಇಲಾಖೆಯಲ್ಲಿ ವಾರ್ಡನ್, ಅಡುಗೆ ಸಿಬ್ಬಂದಿ ವರ್ಗ ಸೇರಿದಂತೆ ಇತರ ಸಿಬ್ಬಂದಿಗಳು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದೇವೆ. ಸರ್ಕಾರ ಕೊರೊನಾ ವಾರಿಯರ್ಸ್‍ಗೆ ಸೇರ್ಪಡೆಗೊಳಿಸಿದಲ್ಲಿ ಅವರು ಮುಕ್ತವಾಗಿ ಕೆಲಸ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಇಲಾಖೆಯಲ್ಲಿ ವಾರ್ಡನ್ ಕೆಲಸ ಮಾಡುತ್ತಿರುವ ಬೆಂಗಳೂರಿನ ಉಮೇಶ್‌ ವೈರಸ್‍ನಿಂದ ಮೃತಪಟ್ಟಿದ್ದಾರೆ. ಸರ್ಕಾರ ಆತನ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ಧನ ನೀಡಬೇಕೆಂದು ಒತ್ತಾಯಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲ್‍ರಡ್ಡಿ ಜೋಳದಡಿಗಿ, ಜಿಲ್ಲಾ ವಾರ್ಡನ್ ಸಂಘದ ಜಿಲ್ಲಾಧ್ಯಕ್ಷ ದೇವಿಂದ್ರಪ್ಪ ರುದ್ರಾವರ, ಶ್ರೀಹರಿ ಘಂಟಿ, ಸುರೇಶ್, ಬಸವರಾಜ ಸಜ್ಜನ್, ಜಗದೇವಿ, ಚಂಪಾದೇವಿ ಸೇರಿದಂತೆ ನೌಕರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT