‘ಆನೆಕಾಲು ರೋಗಕ್ಕೆ ಕಾರಣವಾಗುವ ವೈರಸ್ ಮನುಷ್ಯನ ರಕ್ತದಲ್ಲಿ ಮಾತ್ರ ಜೀವಿಸುತ್ತದೆ. ಸರ್ಕಾರದ ವತಿಯಿಂದ ಪ್ರತಿ ವರ್ಷ ನೀಡಲಾಗುವ ಡಿಇಸಿ ಮಾತ್ರೆಗಳನ್ನು ಐದು ವರ್ಷಗಳ ವರೆಗೆ ತೆಗೆದುಕೊಂಡರೆ ಈ ರೋಗ ಬರದಂತೆ ಎಚ್ಚರಿಕೆ ವಹಿಸಬಹುದು. ಸೊಳ್ಳೆಯ ಪರದೆ, ಮುಲಾಮು, ಲಿಕ್ವಿಡೆಟರ್, ಬೇವಿನ ಮರದ ಸೊಪ್ಪಿನ ಹೊಗೆ ಮಾಡುವುದರಿಂದ ಸೊಳ್ಳೆ ಕಡಿತದಿಂದ ತಪ್ಪಿಸಿಕೊಂಡು ರೋಗಗಳಿಂದ ದೂರ ಇರಬಹುದು. ವೃದ್ಧರು, ಗರ್ಭಿಣಿಯರು, ಬಾಣಂತಿಯರು, ಸಣ್ಣಮಕ್ಕಳು ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವಾಗ ಸೊಳ್ಳೆ ಪರದೆ ತಪ್ಪದೇ ಬಳಸಬೇಕು’ ಎಂದು ಹೇಳಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನೆಹರೂ ರಾಠೋಡ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಹಣಮಂತರೆಡ್ಡಿ, ಹಿರಿಯ ಆರೋಗ್ಯ ಸಹಾಯಕರಾದ ಪರಮರೆಡ್ಡಿ ಕಂದಕೂರ, ಶರಣಯ್ಯ, ಸಮಾಲೋಚಕ ಬಸವರಾಜ ಕಾಂತಾ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.