<p>ಆನೂರು.ಬಿ(ಸೈದಾಪುರ): ‘ಆನೂರು.ಬಿ - ಕಂದಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ ತುಕ್ಕು ಹಿಡಿದು ದುರ್ಬಲಗೊಂಡಿರುವುದರಿಂದ ಅಪಾರ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಗೇಟ್ಗಳನ್ನು ದುರಸ್ತಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಮುದ್ನಾಳ್ ಆಗ್ರಹಿಸಿದ್ದಾರೆ.</p>.<p>ಸಮೀಪದ ಆನೂರು.ಬಿ-ಕಂದಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್ಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದ ಅವರು, ‘ಕಳೆದ ಬಾರಿ ಪ್ರವಾಹ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಎಲ್ಲಾ ಗೇಟ್ಗಳನ್ನು ಎತ್ತದೆ ಬಿಟ್ಟಿದರು. ಇದರಿಂದ ಸುತ್ತತ್ತಲಿನ ಜಮೀನುಗಳಿಗೆ ನೀರು ನುಗ್ಗಿತ್ತು’ ಎಂದು ಆಕ್ರೋಶ ವ್ಯಕ್ಯಪಡಿಸಿದರು.</p>.<p>‘ಗೇಟ್ಗಳು ತುಕ್ಕು ಹಿಡಿದಿವೆ. ಕ್ರೈನ್ ಬಳಿಸಿದರೂ ಮೇಲೆ ಬರಲಾರದ ಸ್ಥಿತಿ ನಿರ್ಮಾಣವಾಗಿದೆ. ಸಮರ್ಪಕ ನಿರ್ವಹಣೆ ಕೊರತೆಯೇ ಇದಕ್ಕೆ ಕಾರಣ. ಬೀಮಾ ನದಿ ನೀರು ಹಿಡಿದಿಡಲು ಕಟ್ಟಿರುವ ಈ ಬ್ರಿಡ್ಜ್ ಕಂ ಬ್ಯಾರೇಜ್ ಸಾವಿರಾರು ರೈತರಿಗೆ ಅನುಕೂಲವಾಗಿದೆ’ ಎಂದ ಅವರು, ‘ಬೇಸಿಗೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗಬಾರದು ಎಂದರೆ ತಕ್ಷಣವೇ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ ಗೇಟ್ಗಳ ದುರಸ್ತಿಗೆ ಮುಂದಾಗಬೇಕು’ ಎಂದು ಆಗ್ರಹಿಸಿದರು.</p>.<p>ಹೈಡ್ರಾಲಿಕ್ ಗೇಟ್ ಅಳವಡಿಸಿ: ಆನೂರು.ಬಿ- ಕಂದಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್ನ ನೀರು ಆಶ್ರಯಸಿಕೊಂಡು ಈ ಭಾಗದ ಜನ ಜೀವನ ಸಾಗಿಸುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಗೇಟ್ ತುಕ್ಕು ಹಿಡಿದು ಅಪಾರ ಪ್ರಮಾಣದ ನೀರು ಸೋರಿಕೆ ಆಗುತ್ತಿದೆ. ಕೂಡಲೇ ತುಕ್ಕು ಹಿಡಿದ ಗೇಟ್ಗಳನ್ನು ತೆರವುಗೊಳಿಸಿ ಹೊಸ ತಂತ್ರಜ್ಞಾನದ (ಹೈಡ್ರಾಲಿಕ್ ಗೇಟ್) ಅಳವಡಿಸಿ ಎಂಬುದು ರೈತರ ಒತ್ತಾಯವಾಗಿದೆ.</p>.<p>ಈ ವೇಳೆ ಕಲ್ಲಪ್ಪ, ಶಾಂತಪ್ಪ, ಮಾಣಿಕರಡ್ಡಿ ಪಾಟೀಲ, ಹಣಮಂತ, ಸುನೀಲ್ ಶೆಟ್ಟಿ, ಬನ್ನಪ್ಪ, ನಬಿಸಾಬ್, ಭೀಮರಾಯ, ಪವನ, ಶರಣಪ್ಪ ನಿಂಗಪ್ಪ, ಬೂದೆಪ್ಪ, ಸುರೇಶ, ರವಿ, ತಾಯಪ್ಪ, ಭರತ ಪೀರ್ ಮಹ್ಮದ್ , ದೇವಪ್ಪ, ಶಿವಾನಂದ, ಶರಣಪ್ಪ, ಚಂದ್ರು, ಶಾಂತಪ್ಪ, ಹಸೇನ್, ಗಂಗು, ಅನೀಲ್, ಭೀಮಣ್ಣ, ಮೆಹಬೂಬಸಾಬ್, ಸಾಬಣ್ಣ, ಮರಿಲಿಂಗಪ್ಪ, ಮಲ್ಲಪ್ಪ, ಪ್ರಭು, ಮರೆಪ್ಪ, ಭೀಮಾಶಂಕರ, ರೆಡ್ಡೆಪ್ಪ, ಸತೀಶ, ಮೋನಪ್ಪ, ಭಾಗಪ್ಪ, ಸಿದ್ದಪ್ಪ, ಬನ್ನಪ್ಪ, ಮಲ್ಲಪ್ಪ, ಮರಗಪ್ಪ, ದೇವಪ್ಪ, ಬನ್ನಪ್ಪ, ಕುಮಾರ, ನರಸಪ್ಪ,ಬಸಪ್ಪ, ಮಹಾದೇವಪ್ಪ, ಹಣಮಂತ, ಜಗದೀಶ, ಬನ್ನಪ್ಪ, ಸುರೇಶ, ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-30-1740543334</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೂರು.ಬಿ(ಸೈದಾಪುರ): ‘ಆನೂರು.ಬಿ - ಕಂದಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ ತುಕ್ಕು ಹಿಡಿದು ದುರ್ಬಲಗೊಂಡಿರುವುದರಿಂದ ಅಪಾರ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಗೇಟ್ಗಳನ್ನು ದುರಸ್ತಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಮುದ್ನಾಳ್ ಆಗ್ರಹಿಸಿದ್ದಾರೆ.</p>.<p>ಸಮೀಪದ ಆನೂರು.ಬಿ-ಕಂದಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್ಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದ ಅವರು, ‘ಕಳೆದ ಬಾರಿ ಪ್ರವಾಹ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಎಲ್ಲಾ ಗೇಟ್ಗಳನ್ನು ಎತ್ತದೆ ಬಿಟ್ಟಿದರು. ಇದರಿಂದ ಸುತ್ತತ್ತಲಿನ ಜಮೀನುಗಳಿಗೆ ನೀರು ನುಗ್ಗಿತ್ತು’ ಎಂದು ಆಕ್ರೋಶ ವ್ಯಕ್ಯಪಡಿಸಿದರು.</p>.<p>‘ಗೇಟ್ಗಳು ತುಕ್ಕು ಹಿಡಿದಿವೆ. ಕ್ರೈನ್ ಬಳಿಸಿದರೂ ಮೇಲೆ ಬರಲಾರದ ಸ್ಥಿತಿ ನಿರ್ಮಾಣವಾಗಿದೆ. ಸಮರ್ಪಕ ನಿರ್ವಹಣೆ ಕೊರತೆಯೇ ಇದಕ್ಕೆ ಕಾರಣ. ಬೀಮಾ ನದಿ ನೀರು ಹಿಡಿದಿಡಲು ಕಟ್ಟಿರುವ ಈ ಬ್ರಿಡ್ಜ್ ಕಂ ಬ್ಯಾರೇಜ್ ಸಾವಿರಾರು ರೈತರಿಗೆ ಅನುಕೂಲವಾಗಿದೆ’ ಎಂದ ಅವರು, ‘ಬೇಸಿಗೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗಬಾರದು ಎಂದರೆ ತಕ್ಷಣವೇ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ ಗೇಟ್ಗಳ ದುರಸ್ತಿಗೆ ಮುಂದಾಗಬೇಕು’ ಎಂದು ಆಗ್ರಹಿಸಿದರು.</p>.<p>ಹೈಡ್ರಾಲಿಕ್ ಗೇಟ್ ಅಳವಡಿಸಿ: ಆನೂರು.ಬಿ- ಕಂದಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್ನ ನೀರು ಆಶ್ರಯಸಿಕೊಂಡು ಈ ಭಾಗದ ಜನ ಜೀವನ ಸಾಗಿಸುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಗೇಟ್ ತುಕ್ಕು ಹಿಡಿದು ಅಪಾರ ಪ್ರಮಾಣದ ನೀರು ಸೋರಿಕೆ ಆಗುತ್ತಿದೆ. ಕೂಡಲೇ ತುಕ್ಕು ಹಿಡಿದ ಗೇಟ್ಗಳನ್ನು ತೆರವುಗೊಳಿಸಿ ಹೊಸ ತಂತ್ರಜ್ಞಾನದ (ಹೈಡ್ರಾಲಿಕ್ ಗೇಟ್) ಅಳವಡಿಸಿ ಎಂಬುದು ರೈತರ ಒತ್ತಾಯವಾಗಿದೆ.</p>.<p>ಈ ವೇಳೆ ಕಲ್ಲಪ್ಪ, ಶಾಂತಪ್ಪ, ಮಾಣಿಕರಡ್ಡಿ ಪಾಟೀಲ, ಹಣಮಂತ, ಸುನೀಲ್ ಶೆಟ್ಟಿ, ಬನ್ನಪ್ಪ, ನಬಿಸಾಬ್, ಭೀಮರಾಯ, ಪವನ, ಶರಣಪ್ಪ ನಿಂಗಪ್ಪ, ಬೂದೆಪ್ಪ, ಸುರೇಶ, ರವಿ, ತಾಯಪ್ಪ, ಭರತ ಪೀರ್ ಮಹ್ಮದ್ , ದೇವಪ್ಪ, ಶಿವಾನಂದ, ಶರಣಪ್ಪ, ಚಂದ್ರು, ಶಾಂತಪ್ಪ, ಹಸೇನ್, ಗಂಗು, ಅನೀಲ್, ಭೀಮಣ್ಣ, ಮೆಹಬೂಬಸಾಬ್, ಸಾಬಣ್ಣ, ಮರಿಲಿಂಗಪ್ಪ, ಮಲ್ಲಪ್ಪ, ಪ್ರಭು, ಮರೆಪ್ಪ, ಭೀಮಾಶಂಕರ, ರೆಡ್ಡೆಪ್ಪ, ಸತೀಶ, ಮೋನಪ್ಪ, ಭಾಗಪ್ಪ, ಸಿದ್ದಪ್ಪ, ಬನ್ನಪ್ಪ, ಮಲ್ಲಪ್ಪ, ಮರಗಪ್ಪ, ದೇವಪ್ಪ, ಬನ್ನಪ್ಪ, ಕುಮಾರ, ನರಸಪ್ಪ,ಬಸಪ್ಪ, ಮಹಾದೇವಪ್ಪ, ಹಣಮಂತ, ಜಗದೀಶ, ಬನ್ನಪ್ಪ, ಸುರೇಶ, ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-30-1740543334</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>