ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೌದ್ಧ ಧರ್ಮ ನಮೂದಿಸಲು ಮನವಿ

Last Updated 15 ಜುಲೈ 2021, 13:37 IST
ಅಕ್ಷರ ಗಾತ್ರ

ಸುರಪುರ: ಪರಿಶಿಷ್ಟ ಜಾತಿಯ ಮಕ್ಕಳ ಶಾಲಾ ಪ್ರವೇಶ ಅರ್ಜಿಯಲ್ಲಿನ ಧರ್ಮ ಕಾಲಂನಲ್ಲಿ ‘ಬೌದ್ಧ‘ ಎಂದು ನಮೂದಿಸಬೇಕು ಎಂದು ಮೂಲನಿವಾಸಿ ಅಂಬೇಡ್ಕರ್ ಸೇನೆಯ ಮುಖಂಡರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧಿಕಾರಿ ಜಗದೀಶ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಸೇನೆಯ ರಾಜ್ಯ ಸಂಘಟನಾ ಸಂಚಾಲಕ ರಾಹುಲ ಹುಲಿಮನಿ ಮಾತನಾಡಿ, ‘ಪ್ರವೇಶಾತಿ ಸಂದರ್ಭದಲ್ಲಿ ಪೋಷಕರು ಧರ್ಮ ಕಾಲಂನಲ್ಲಿ ಬೌದ್ಧ ಎಂದು ನಮೂದಿಸಲು ಹೇಳಿದರೆ ಶಾಲೆಯ ಸಿಬ್ಬಂದಿ ಯಾವುದೇ ಅಡೆತಡೆ ಮಾಡಬಾರದು’ ಎಂದರು.

‘ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಎಲ್ಲ ಶಾಲೆಗಳಿಗೆ ಮುಖ್ಯ ಗುರುಗಳಿಗೆ ಸುತ್ತೋಲೆ ಹೊರಡಿಸಿ ಈ ಬಗ್ಗೆ ಸ್ಪಷ್ಟ ಸೂಚನೆ ಕೊಡಬೇಕು’ ಎಂದು ಆಗ್ರಹಿಸಿದರು.

ವೆಂಕಟೇಶ ಬಡಿಗೇರ, ಹಣಮಂತ ರತ್ತಾಳ, ರಾಜು ಬಡಿಗೇರ, ಶಿವಣ್ಣ ಸಾಸಿಗೇರ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT