<p><strong>ಸುರಪುರ:</strong> ತಾಲ್ಲೂಕಿನ ತುಪ್ಪದ ಬೊಮ್ಮನಳ್ಳಿ ಗ್ರಾಮದಲ್ಲಿ ದೇವತೆಗಳ ಉತ್ಸವದ ನೆಪದಲ್ಲಿ ನಡೆಯುತ್ತಿರುವ ಕುರಿ,ಕೋಣ ಬಲಿ ನಿಲ್ಲಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ಮುಖಂಡರು ಪೊಲೀಸ್ ಇನ್ಸ್ಪೆಕ್ಟರ್ ಆನಂದ ವಾಗ್ಮೋಡೆ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ‘ಟಿ. ಬೊಮ್ಮನಳ್ಳಿ ಗ್ರಾಮದಲ್ಲಿ ಡಿ. 8 ರಿಂದ 9 ರವರೆಗೆ ದ್ಯಾವಮ್ಮ, ಮರಿಗೆಮ್ಮ, ಕೆಂಚಮ್ಮ ದೇವತೆಗಳ ಉತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ನೂರಾರು ಕುರಿ, ಕೋಣ ಬಲಿಕೊಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಈ ಆಚರಣೆಯಿಂದ ಗ್ರಾಮದಲ್ಲಿ ಅಶಾಂತಿ ಸೃಷ್ಟಿಯಾಗಿ ಗಲಾಟೆ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಪ್ರತಿ ಉತ್ಸವ ವೇಳೆ ನಾವು ಮನವಿ ಕೊಡುತ್ತಾ ಬಂದಿದ್ದೇವೆ. ಆದರೂ ಪೊಲೀಸರು ಬಿಗಿ ಕ್ರಮ ಕೈಗೊಳ್ಳುತ್ತಿಲ್ಲ. ನಿರ್ಲಕ್ಷ್ಯ ವಹಿಸಿದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕು ಸಮಿತಿ ಸಂಚಾಲಕ ಬಸವರಾಜ ದೊಡ್ಮನಿ, ಹಣಮಂತ ಕಟ್ಟಿಮನಿ, ಮಹಾದೇವಪ್ಪ ಬಿಜಾಸ್ಪೂರ, ಮಾನಪ್ಪ ಬಿಜಾಸ್ಪೂರ, ದೇವಿಂದ್ರಪ್ಪ ಬಾದ್ಯಾಪುರ, ವೀರಭದ್ರ, ತಳವಾರಗೇರಾ, ಜಟ್ಟೆಪ್ಪ ನಾಗರಾಳ, ಖಾಜಾ ಹುಸೇನ ಗುಡುಗುಂಟಿ. ಬುದ್ದಿವಂತ ನಾಗರಾಳ, ಮಾನಪ್ಪ ಇಸ್ಲಾಂಪುರ, ಭೀಮರಾಯ ದೊಡ್ಮನಿ, ಮಹೇಶ ಯಾದಗಿರಿಕರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ತಾಲ್ಲೂಕಿನ ತುಪ್ಪದ ಬೊಮ್ಮನಳ್ಳಿ ಗ್ರಾಮದಲ್ಲಿ ದೇವತೆಗಳ ಉತ್ಸವದ ನೆಪದಲ್ಲಿ ನಡೆಯುತ್ತಿರುವ ಕುರಿ,ಕೋಣ ಬಲಿ ನಿಲ್ಲಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ಮುಖಂಡರು ಪೊಲೀಸ್ ಇನ್ಸ್ಪೆಕ್ಟರ್ ಆನಂದ ವಾಗ್ಮೋಡೆ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ‘ಟಿ. ಬೊಮ್ಮನಳ್ಳಿ ಗ್ರಾಮದಲ್ಲಿ ಡಿ. 8 ರಿಂದ 9 ರವರೆಗೆ ದ್ಯಾವಮ್ಮ, ಮರಿಗೆಮ್ಮ, ಕೆಂಚಮ್ಮ ದೇವತೆಗಳ ಉತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ನೂರಾರು ಕುರಿ, ಕೋಣ ಬಲಿಕೊಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಈ ಆಚರಣೆಯಿಂದ ಗ್ರಾಮದಲ್ಲಿ ಅಶಾಂತಿ ಸೃಷ್ಟಿಯಾಗಿ ಗಲಾಟೆ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಪ್ರತಿ ಉತ್ಸವ ವೇಳೆ ನಾವು ಮನವಿ ಕೊಡುತ್ತಾ ಬಂದಿದ್ದೇವೆ. ಆದರೂ ಪೊಲೀಸರು ಬಿಗಿ ಕ್ರಮ ಕೈಗೊಳ್ಳುತ್ತಿಲ್ಲ. ನಿರ್ಲಕ್ಷ್ಯ ವಹಿಸಿದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕು ಸಮಿತಿ ಸಂಚಾಲಕ ಬಸವರಾಜ ದೊಡ್ಮನಿ, ಹಣಮಂತ ಕಟ್ಟಿಮನಿ, ಮಹಾದೇವಪ್ಪ ಬಿಜಾಸ್ಪೂರ, ಮಾನಪ್ಪ ಬಿಜಾಸ್ಪೂರ, ದೇವಿಂದ್ರಪ್ಪ ಬಾದ್ಯಾಪುರ, ವೀರಭದ್ರ, ತಳವಾರಗೇರಾ, ಜಟ್ಟೆಪ್ಪ ನಾಗರಾಳ, ಖಾಜಾ ಹುಸೇನ ಗುಡುಗುಂಟಿ. ಬುದ್ದಿವಂತ ನಾಗರಾಳ, ಮಾನಪ್ಪ ಇಸ್ಲಾಂಪುರ, ಭೀಮರಾಯ ದೊಡ್ಮನಿ, ಮಹೇಶ ಯಾದಗಿರಿಕರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>