<p><strong>ಯಾದಗಿರಿ: </strong>‘ಆಶಾ ಕಾರ್ಯಕರ್ತೆಯರು ನ್ಯಾಯಯುತ ಬೇಡಿಕೆಗಳು ಈಡೇರಿಸುವಂತೆ ಕೋರಿ, ಹಲವು ಭಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸ್ಪಂದನೆ ದೊರೆಯುತ್ತಿಲ್ಲ. ಇಂತಹ ಹಠಮಾರಿ ಧೋರಣೆಯನ್ನು ಸರ್ಕಾರ ಬಿಡಬೇಕು‘ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷೆ ಡಿ.ಉಮಾದೇವಿ ಹೇಳಿದರು.</p>.<p>ನಗರದ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಮಂಗಳವಾರ ಆಶಾ ಕಾರ್ಯಕರ್ತೆಯರು ಮಾನವ ಸರಪಳಿ ರಚಿಸುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ವೇಳೆ ಅವರು ಮಾತನಾಡಿದರು.</p>.<p>ಜು.10 ರಿಂದ ನಮ್ಮ ಹೋರಾಟವು ತೀವ್ರಗೊಂಡಿದ್ದು ಈಗಾಗಲೇ ಆಶಾ ಕಾರ್ಯಕರ್ತೆಯರು ಸೇವೆಯನ್ನು ಸ್ಥಗಿತಗೊಳಿಸಿದ್ದೇವೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಜರುಗಬೇಕಿದ್ದ ಆರೋಗ್ಯ ಚಟುವಟಿಕೆಗಳು ಸ್ಥಗಿತಗೊಂಡಿವೆ. ಆದರೂ, ಸರ್ಕಾರ ತನ್ನ ಹಠಮಾರಿತನ ಬಿಡದಿದ್ದರೆ ಹೇಗೆ? ಎಂದು ಪ್ರಶ್ನಿಸಿದರು.</p>.<p>‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹ 12,000 ಗೌರವಧನ ಹೆಚ್ಚಿಸಬೇಕು. ಕೋವಿಡ್ ಸಂಬಂಧ ಸಂಪೂರ್ಣ ಸುರಕ್ಷತಾ ಪರಿಕರಗಳನ್ನು ವಿತರಿಸಬೇಕು. ಆಶಾ ಕಾರ್ಯಕರ್ತೆಯರ ಸಮಸ್ಯೆ ಆಲಿಸಲು ಆಗಾಗ ಸಭೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ಲಲಿತಾ, ರೇಣುಕಾ, ಯಶೋಧಾ, ಮಹಾಲಕ್ಷ್ಮಿ, ಸಿದ್ದಮ್ಮ, ಚಂದಮ್ಮ, ಸುನಿತಾ, ಶಾರದಾ, ಸಂಗಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>‘ಆಶಾ ಕಾರ್ಯಕರ್ತೆಯರು ನ್ಯಾಯಯುತ ಬೇಡಿಕೆಗಳು ಈಡೇರಿಸುವಂತೆ ಕೋರಿ, ಹಲವು ಭಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸ್ಪಂದನೆ ದೊರೆಯುತ್ತಿಲ್ಲ. ಇಂತಹ ಹಠಮಾರಿ ಧೋರಣೆಯನ್ನು ಸರ್ಕಾರ ಬಿಡಬೇಕು‘ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷೆ ಡಿ.ಉಮಾದೇವಿ ಹೇಳಿದರು.</p>.<p>ನಗರದ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಮಂಗಳವಾರ ಆಶಾ ಕಾರ್ಯಕರ್ತೆಯರು ಮಾನವ ಸರಪಳಿ ರಚಿಸುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ವೇಳೆ ಅವರು ಮಾತನಾಡಿದರು.</p>.<p>ಜು.10 ರಿಂದ ನಮ್ಮ ಹೋರಾಟವು ತೀವ್ರಗೊಂಡಿದ್ದು ಈಗಾಗಲೇ ಆಶಾ ಕಾರ್ಯಕರ್ತೆಯರು ಸೇವೆಯನ್ನು ಸ್ಥಗಿತಗೊಳಿಸಿದ್ದೇವೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಜರುಗಬೇಕಿದ್ದ ಆರೋಗ್ಯ ಚಟುವಟಿಕೆಗಳು ಸ್ಥಗಿತಗೊಂಡಿವೆ. ಆದರೂ, ಸರ್ಕಾರ ತನ್ನ ಹಠಮಾರಿತನ ಬಿಡದಿದ್ದರೆ ಹೇಗೆ? ಎಂದು ಪ್ರಶ್ನಿಸಿದರು.</p>.<p>‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹ 12,000 ಗೌರವಧನ ಹೆಚ್ಚಿಸಬೇಕು. ಕೋವಿಡ್ ಸಂಬಂಧ ಸಂಪೂರ್ಣ ಸುರಕ್ಷತಾ ಪರಿಕರಗಳನ್ನು ವಿತರಿಸಬೇಕು. ಆಶಾ ಕಾರ್ಯಕರ್ತೆಯರ ಸಮಸ್ಯೆ ಆಲಿಸಲು ಆಗಾಗ ಸಭೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ಲಲಿತಾ, ರೇಣುಕಾ, ಯಶೋಧಾ, ಮಹಾಲಕ್ಷ್ಮಿ, ಸಿದ್ದಮ್ಮ, ಚಂದಮ್ಮ, ಸುನಿತಾ, ಶಾರದಾ, ಸಂಗಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>