<p><strong>ಹುಣಸಗಿ</strong>: ಕೊಡೇಕಲ್ಲ ವಲಯದ 37 ಹಳ್ಳಿಗಳಿಗೂ ನಿರಂತರ ಜ್ಯೋತಿ ವಿದ್ಯುತ್ ಸರಬರಾಜು ಮತ್ತು ಕೊಡೇಕಲ್ಲ ಪಟ್ಟಣಕ್ಕೆ ಪ್ರತ್ಯೇಕ ಫಿಡರ್ ಅಳವಡಿಕೆ ಮಾಡುವಂತೆ ಒತ್ತಾಯಿಸಿ ಎರಡು ದಿನದಿಂದ ನಡೆದ ಧರಣಿ ಸ್ಥಳಕ್ಕೆ ಮಂಗಳವಾರ ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ರಾಘವೇಂದ್ರ ಆಗಮಿಸಿ ಮನವಿ ಸ್ವೀಕರಿಸಿದರು.</p>.<p>ಈ ಸಂದರ್ಭದಲ್ಲಿ ಕರವೇ (ಪ್ರವೀಣ್ ಶೆಟ್ಟಿ) ಬಣದ ತಾಲ್ಲೂಕು ಅಧ್ಯಕ್ಷ ರಮೇಶ ಬಿರಾದಾರ ಮಾತನಾಡಿ, ನಮ್ಮ ಬೇಡಿಕೆ ಬಗ್ಗೆ ಸಾಕಷ್ಟು ಸಲ ಮನವಿ ಮಾಡಿಕೊಂಡಿದ್ದೇವು, ಆದರೆ ಜೆಸ್ಕಾಂ ಅಧಿಕಾರಿಗಳು ಸ್ಪಂದಿಸಿಲ್ಲ ಆದ್ದರಿಂದ ಧರಣಿ ಹಮ್ಮಿಕೊಳ್ಳುವಂತಾಗಿತ್ತು ಎಂದರು.</p>.<p>ಇಇ ರಾಘವೇಂದ್ರ ಅವರು ಮಾತನಾಡಿ, 10 ದಿನದ ತಮ್ಮ ಸಮಸ್ಯೆ ಬಗೆ ಹರಿಸುವದಾಗಿ ಲಿಖಿತ ಭರವಸೆ ನೀಡಿದ್ದರಿಂದ ಧರಣಿ ಅಂತ್ಯಗೊಳಿಸಿದರು.<br />ತಾಲ್ಲೂಕು ಗೌರವಾಧ್ಯಕ್ಷ ಶಿವರಾಜ ಹೊಕ್ರಾಣಿ, ತಾಲ್ಲೂಕು ಉಪಾಧ್ಯಕ್ಷ ದೇವರಾಜ ಪಾಟೀಲ, ಕಾರ್ಯದರ್ಶಿ ಅಮರೇಶ ನೂಲಿ, ವಲಯಾಧ್ಯಕ್ಷ ರಮೇಶ ಪೂಜಾರಿ, ಪದಾಧಿಕಾರಿಗಳು<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ</strong>: ಕೊಡೇಕಲ್ಲ ವಲಯದ 37 ಹಳ್ಳಿಗಳಿಗೂ ನಿರಂತರ ಜ್ಯೋತಿ ವಿದ್ಯುತ್ ಸರಬರಾಜು ಮತ್ತು ಕೊಡೇಕಲ್ಲ ಪಟ್ಟಣಕ್ಕೆ ಪ್ರತ್ಯೇಕ ಫಿಡರ್ ಅಳವಡಿಕೆ ಮಾಡುವಂತೆ ಒತ್ತಾಯಿಸಿ ಎರಡು ದಿನದಿಂದ ನಡೆದ ಧರಣಿ ಸ್ಥಳಕ್ಕೆ ಮಂಗಳವಾರ ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ರಾಘವೇಂದ್ರ ಆಗಮಿಸಿ ಮನವಿ ಸ್ವೀಕರಿಸಿದರು.</p>.<p>ಈ ಸಂದರ್ಭದಲ್ಲಿ ಕರವೇ (ಪ್ರವೀಣ್ ಶೆಟ್ಟಿ) ಬಣದ ತಾಲ್ಲೂಕು ಅಧ್ಯಕ್ಷ ರಮೇಶ ಬಿರಾದಾರ ಮಾತನಾಡಿ, ನಮ್ಮ ಬೇಡಿಕೆ ಬಗ್ಗೆ ಸಾಕಷ್ಟು ಸಲ ಮನವಿ ಮಾಡಿಕೊಂಡಿದ್ದೇವು, ಆದರೆ ಜೆಸ್ಕಾಂ ಅಧಿಕಾರಿಗಳು ಸ್ಪಂದಿಸಿಲ್ಲ ಆದ್ದರಿಂದ ಧರಣಿ ಹಮ್ಮಿಕೊಳ್ಳುವಂತಾಗಿತ್ತು ಎಂದರು.</p>.<p>ಇಇ ರಾಘವೇಂದ್ರ ಅವರು ಮಾತನಾಡಿ, 10 ದಿನದ ತಮ್ಮ ಸಮಸ್ಯೆ ಬಗೆ ಹರಿಸುವದಾಗಿ ಲಿಖಿತ ಭರವಸೆ ನೀಡಿದ್ದರಿಂದ ಧರಣಿ ಅಂತ್ಯಗೊಳಿಸಿದರು.<br />ತಾಲ್ಲೂಕು ಗೌರವಾಧ್ಯಕ್ಷ ಶಿವರಾಜ ಹೊಕ್ರಾಣಿ, ತಾಲ್ಲೂಕು ಉಪಾಧ್ಯಕ್ಷ ದೇವರಾಜ ಪಾಟೀಲ, ಕಾರ್ಯದರ್ಶಿ ಅಮರೇಶ ನೂಲಿ, ವಲಯಾಧ್ಯಕ್ಷ ರಮೇಶ ಪೂಜಾರಿ, ಪದಾಧಿಕಾರಿಗಳು<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>