ಯಾದಗಿರಿ: ನಗರ ಪೊಲೀಸ್ ಠಾಣೆಯ ಪಿಎಸ್ಐ ಸೌಮ್ಯ ಅವರ ಹುಟ್ಟಿದ ದಿನವನ್ನು ಹಲವಾರು ಮಂದಿ ಸೇರಿ ಸಂಭ್ರಮದಿಂದ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಅಂತರ ಪಾಲನೆಯಾಗಿಲ್ಲ ಎಂದು ಕೆಲವರು ಆರೋಪಿಸುತ್ತಿದ್ದಾರೆ.
ಭಾನುವಾರ ರಾತ್ರಿಪೊಲೀಸ್ ಠಾಣೆಯಲ್ಲೇ ಪಿಎಸ್ಐ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ ಎನ್ನಲಾದ ವಿಡಿಯೊ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
‘ಕೊರೊನಾದ ಈ ಸಂದರ್ಭದಲ್ಲಿ ಅಂತರ ಪಾಲನೆ ಮಾಡದೇ ಕಾನೂನು ಪಾಲಕರೇ ಹೀಗೆ ಮಾಡಿದರೆ ಹೇಗೆ’ ಎಂದು ಸಾಮಾಜಿಕ ಕಾರ್ಯಕರ್ತಬಸವರಾಜ ಪಾಟೀಲ ಪ್ರಶ್ನಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಪ್ರತಿಕ್ರಿಯಿಸಿ, ‘ಮಾಹಿತಿ ಕೇಳಿದ್ದೇನೆ. ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.