<p><strong>ಹುಣಸಗಿ: </strong>‘ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಪಡೆಯುವ ಹಕ್ಕು ಇದೆ. ಸರ್ಕಾರ ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಿದೆ. ಆದ್ದರಿಂದ ಮಕ್ಕಳಿಗೆ ಕೂಲಿ ಕೆಲಸಕ್ಕೆ ಕಳಿಸುವದು ಅಪರಾಧವಾಗಿದೆ’ ಎಂದು ಪೊಲೀಸ್ ಕಾನ್ಸ್ಟೇಬಲ್ ಶಿವನಗೌಡ ಹೇಳಿದರು.</p>.<p>ಪಟ್ಟಣದ ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾರ್ಮಿಕ ಇಲಾಖೆ, ಕಲ್ಯಾಣ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ ಕಾಡಂಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬೀದಿ ನಾಟಕ ಕಾರ್ಯಕ್ರಮಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.</p>.<p>ಶರಣಪ್ಪ ಯಡಹಳ್ಳಿ, ಕಲ್ಯಾಣ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಶರಣು ಎಸ್ ಕಾಡಂಗೇರಾ ಮಾತಾನಾಡಿದರು.</p>.<p>ಸಿದ್ದೇಶ್ವರ ಕಲಾ ತಂಡದ ಮುಖ್ಯಸ್ಥರಾದ ಶರಣಯ್ಯ ಸ್ವಾಮಿ ಹಿರೇಮಠ, ಚಂದ್ರಕಾಂತ ಆಳಂದ, ಮಲ್ಲಿಕಾರ್ಜುನ ಬಾಗೇವಾಡಿ, ಜ್ಯೋತಿ, ಕಮಲ ಬಾಗೇವಾಡಿ, ಪ್ರಕಾಶ ಇದ್ದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿ ಪ್ರಕಾಶ ಪಾಟೀಲ ಬಾಲ ಕಾರ್ಮಿಕ ವಿರೋಧಿ ದಿನದ ಕುರಿತು ತಿಳಿವಳಿಕೆ ನೀಡಿದರು.</p>.<p>ಬಳಿಕ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಪ್ರಮಾಣ ವಚನ ಬೊಧಿಸಿದರು. ಈ ಸಂದರ್ಭದಲ್ಲಿ ಬಸರಡ್ಡಿ ಕುಪ್ಪಿ, ರೇವಣಸಿದ್ದಯ್ಯ ಹಿರೇಮಠ, ರಶ್ಮಿ, ಮಾನಪ್ಪ ಬಡಿಗೇರ, ಅನೀಲ, ಸೈಯದ್ ಮೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ: </strong>‘ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಪಡೆಯುವ ಹಕ್ಕು ಇದೆ. ಸರ್ಕಾರ ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಿದೆ. ಆದ್ದರಿಂದ ಮಕ್ಕಳಿಗೆ ಕೂಲಿ ಕೆಲಸಕ್ಕೆ ಕಳಿಸುವದು ಅಪರಾಧವಾಗಿದೆ’ ಎಂದು ಪೊಲೀಸ್ ಕಾನ್ಸ್ಟೇಬಲ್ ಶಿವನಗೌಡ ಹೇಳಿದರು.</p>.<p>ಪಟ್ಟಣದ ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾರ್ಮಿಕ ಇಲಾಖೆ, ಕಲ್ಯಾಣ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ ಕಾಡಂಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬೀದಿ ನಾಟಕ ಕಾರ್ಯಕ್ರಮಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.</p>.<p>ಶರಣಪ್ಪ ಯಡಹಳ್ಳಿ, ಕಲ್ಯಾಣ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಶರಣು ಎಸ್ ಕಾಡಂಗೇರಾ ಮಾತಾನಾಡಿದರು.</p>.<p>ಸಿದ್ದೇಶ್ವರ ಕಲಾ ತಂಡದ ಮುಖ್ಯಸ್ಥರಾದ ಶರಣಯ್ಯ ಸ್ವಾಮಿ ಹಿರೇಮಠ, ಚಂದ್ರಕಾಂತ ಆಳಂದ, ಮಲ್ಲಿಕಾರ್ಜುನ ಬಾಗೇವಾಡಿ, ಜ್ಯೋತಿ, ಕಮಲ ಬಾಗೇವಾಡಿ, ಪ್ರಕಾಶ ಇದ್ದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿ ಪ್ರಕಾಶ ಪಾಟೀಲ ಬಾಲ ಕಾರ್ಮಿಕ ವಿರೋಧಿ ದಿನದ ಕುರಿತು ತಿಳಿವಳಿಕೆ ನೀಡಿದರು.</p>.<p>ಬಳಿಕ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಪ್ರಮಾಣ ವಚನ ಬೊಧಿಸಿದರು. ಈ ಸಂದರ್ಭದಲ್ಲಿ ಬಸರಡ್ಡಿ ಕುಪ್ಪಿ, ರೇವಣಸಿದ್ದಯ್ಯ ಹಿರೇಮಠ, ರಶ್ಮಿ, ಮಾನಪ್ಪ ಬಡಿಗೇರ, ಅನೀಲ, ಸೈಯದ್ ಮೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>