<p><strong>ಯಾದಗಿರಿ: </strong>ವಾರಾಂತ್ಯ ಕರ್ಫ್ಯೂ ಕಾರಣ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿಅವರು ಭಾನುವಾರ ಬೆಳಿಗ್ಗೆ ನಗರದಲ್ಲಿ ಪ್ರದಕ್ಷಣೆ ಹಾಕಿ ಮಾಸ್ಕ್ ಧರಿಸುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.</p>.<p>ನಗರದ ಚಿತ್ತಾಪುರ ರಸ್ತೆಯಲ್ಲಿ ತೆರಳಿದ ಅಧಿಕಾರಿಗಳು ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ ಮಾಸ್ಕ್ ನೀಡಿದರು.</p>.<p>ಬೈಕ್ ಸವಾರರು, ಟಂಟಂ ಆಟೊದಲ್ಲಿ ಪ್ರಯಾಣಿಸುತ್ತಿದ್ದವರಿಗೆ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಿದರು.</p>.<p>ಈ ವೇಳೆ ಅಂಗಡಿ ಮುಂಗಟ್ಟುನಲ್ಲಿ ಮುಖಕ್ಕೆ ಟವೆಲ್ ಮುಚ್ಚಿಕೊಳ್ಳಲು ವ್ಯಾಪಾರಸ್ಥರು ಮುಂದಾದರು. ಆಗ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಅವರು, ಮಾಸ್ಕ್ ಹಾಕಿಕೊಳ್ಳಿ. ಟವೆಲ್ ಸುತ್ತಿಕೊಳ್ಳಬೇಡಿ ಎಂದರು.</p>.<p>ಈ ವೇಳೆ ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಶಾ ಆಲಂ ಹುಸೇನ್, ನಗರ ಠಾಣೆ ಪಿಎಸ್ಐ ಚಂದ್ರಶೇಖರ, ನಗರಸಭೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ವಾರಾಂತ್ಯ ಕರ್ಫ್ಯೂ ಕಾರಣ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿಅವರು ಭಾನುವಾರ ಬೆಳಿಗ್ಗೆ ನಗರದಲ್ಲಿ ಪ್ರದಕ್ಷಣೆ ಹಾಕಿ ಮಾಸ್ಕ್ ಧರಿಸುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.</p>.<p>ನಗರದ ಚಿತ್ತಾಪುರ ರಸ್ತೆಯಲ್ಲಿ ತೆರಳಿದ ಅಧಿಕಾರಿಗಳು ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ ಮಾಸ್ಕ್ ನೀಡಿದರು.</p>.<p>ಬೈಕ್ ಸವಾರರು, ಟಂಟಂ ಆಟೊದಲ್ಲಿ ಪ್ರಯಾಣಿಸುತ್ತಿದ್ದವರಿಗೆ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಿದರು.</p>.<p>ಈ ವೇಳೆ ಅಂಗಡಿ ಮುಂಗಟ್ಟುನಲ್ಲಿ ಮುಖಕ್ಕೆ ಟವೆಲ್ ಮುಚ್ಚಿಕೊಳ್ಳಲು ವ್ಯಾಪಾರಸ್ಥರು ಮುಂದಾದರು. ಆಗ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಅವರು, ಮಾಸ್ಕ್ ಹಾಕಿಕೊಳ್ಳಿ. ಟವೆಲ್ ಸುತ್ತಿಕೊಳ್ಳಬೇಡಿ ಎಂದರು.</p>.<p>ಈ ವೇಳೆ ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಶಾ ಆಲಂ ಹುಸೇನ್, ನಗರ ಠಾಣೆ ಪಿಎಸ್ಐ ಚಂದ್ರಶೇಖರ, ನಗರಸಭೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>