ಯಾದಗಿರಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ತ್ರಿವರ್ಣ ಧ್ವಜ ಜಾಥಾಕ್ಕೆ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ನಗರದ ಗಂಜ್ ವೃತ್ತದಲ್ಲಿ ಚಾಲನೆ ನೀಡಿದರು.
ಗಂಜ್ ಸರ್ಕಲ್ನಿಂದ ಆರಂಭವಾದ ತ್ರಿವರ್ಣ ಜಾಥಾವು ಮೈಲಾಪುರ ಆಗಸಿ, ಚಕ್ರಕಟ್ಟಾ, ಗಾಂಧಿ ವೃತ್ತಕ್ಕೆ ಆಗಮಿಸಿ ಸಮಾಪ್ತಿಯಾಯಿತು.
ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ಜಾಥಾದ ಉದ್ದಕ್ಕೂ ಮಕ್ಕಳೊಂದಿಗೆ ಹೆಜ್ಜೆ ಹಾಕಿರುವುದು ವಿಶೇಷವಾಗಿತ್ತು.
ಜಾಥಾದಲ್ಲಿ ವಿದ್ಯಾರ್ಥಿಗಳು ಜೈ ಜವಾನ್, ಜೈ ಕಿಸಾನ್, ಒಂದೇ ಮಾತರಂ ಘೋಷಣೆ ಕೂಗಿದರು.
ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಯುಡಾ ಅಧ್ಯಕ್ಷ ರುದ್ರಗೌಡ ಪಾಟೀಲ, ಸಮಾಜ ಕಲ್ಯಾಣ ಉಪನಿರ್ದೇಶಕ ಎಸ್.ಎಸ್. ಚನ್ನಬಸವ, ಯೂಡಾ ಆಯುಕ್ತ ಬಕ್ಕಪ್ಪ ಹೊಸಮನಿ, ನಗರಸಭೆ ಸದಸ್ಯರಾದ ವಿಲಾಸ್ ಪಾಟೀಲ,ಹಣಮಂತ ಇಟಗಿ, ಪೌರಾಯುಕ್ತ ಶರಣಪ್ಪ ಇದ್ದರು.