ಈ ಹಿಂದೆ ಡಿ.ಕೆ.ಶಿವಕುಮಾರ ಅವರು ಗೋನಾಲ ಗ್ರಾಮಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದರು. ತಮ್ಮನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವಂತೆ ಶಿವಕುಮಾರ್ ಪತ್ರ ಬರೆದಿದ್ದರು ಎನ್ನಲಾಗಿದೆ. ಈಗ ಶ್ರೀರಾಮುಲು ಅವರು ದೇವಿಯ ದರ್ಶನ ಪಡೆದು ತಮ್ಮನ್ನು ಡಿಸಿಎಂ ಮಾಡುವಂತೆ ಕೇಳಿಕೊಂಡಿದ್ದಾರೆ. ದೇವಿಯ ಮುಂದೆ ನಾನು ಪ್ರಾರ್ಥಿಸಿದ್ದನ್ನು ಸಾರ್ವಜನಿಕವಾಗಿ ಪ್ರಕಟಿಸಬಾರದು ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದರು.