<p><strong>ಯಾದಗಿರಿ: </strong>ತಾಲ್ಲೂಕಿನ ಬಂದಳ್ಳಿ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ ನೀಡದ ಕಾರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಅವರು ಜಿಲ್ಲಾಡಳಿತ, ಸಚಿವ ಶ್ರೀರಾಮಲು ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿ ಕಾರ್ಯಕ್ರಮ ರದ್ದುಗೊಳಿಸುವಂತೆ ಆಗ್ರಹಿಸಿದರು.</p>.<p>ಬಂದಳ್ಳಿ ಗ್ರಾಮದ ಬಳಿ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರ ಕಾರುಗೆ ಅಡ್ಡ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಿಂದಗಿ ಉಪ ಚುನಾವಣಾ ಅಂಗವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೆ. ಆದರೆ, ನನ್ನ ಗಮನಕ್ಕೆ ತಾರದೇ ಸಮಾರಂಭ ಆಯೋಜಿಸಲಾಗಿದೆ. ಏಕಲವ್ಯ ಶಾಲೆ ನಾನು ಸಚಿವನಾಗಿದ್ದಾಗ ಮಂಜೂರು ಮಾಡಿಸಿಕೊಂಡು ಬಂದಿದ್ದೇನೆ. ಇಂಥ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡದಿದ್ದರೆ ಹೇಗೆ ಎಂದು ಕಿಡಿಕಾರಿದರು.</p>.<p>ಐದು ಬಾರಿ ಶಾಸಕ, ಎರಡು ಬಾರಿ ಸಚಿವನಾಗಿದ್ದೇನೆ. ನನ್ನ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡದಿದ್ದರೆ ಹೇಗೆ ಆಕ್ರೋಶ ಹೊರ ಹಾಕಿದರು.</p>.<p>ಈ ವೇಳೆ ಸಚಿವ ಶ್ರೀರಾಮಲು ಅವರು ಚಿಂಚನಸೂರ ಮನವೊಲಿಸಿದರೂ ವಾಪಾಸ್ ಯಾದಗಿರಿಗೆ ತೆರಳಿದರು.</p>.<p>ಸಾರಿಗೆ ಮತ್ತು ಪರಿಶಿಷ್ಟ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಅಕ್ಟೋಬರ್ 9ರಂದು ಬೆಳಿಗ್ಗೆ 10 ಗಂಟೆ ಕಟ್ಟಡ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ತಾಲ್ಲೂಕಿನ ಬಂದಳ್ಳಿ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ ನೀಡದ ಕಾರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಅವರು ಜಿಲ್ಲಾಡಳಿತ, ಸಚಿವ ಶ್ರೀರಾಮಲು ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿ ಕಾರ್ಯಕ್ರಮ ರದ್ದುಗೊಳಿಸುವಂತೆ ಆಗ್ರಹಿಸಿದರು.</p>.<p>ಬಂದಳ್ಳಿ ಗ್ರಾಮದ ಬಳಿ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರ ಕಾರುಗೆ ಅಡ್ಡ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಿಂದಗಿ ಉಪ ಚುನಾವಣಾ ಅಂಗವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೆ. ಆದರೆ, ನನ್ನ ಗಮನಕ್ಕೆ ತಾರದೇ ಸಮಾರಂಭ ಆಯೋಜಿಸಲಾಗಿದೆ. ಏಕಲವ್ಯ ಶಾಲೆ ನಾನು ಸಚಿವನಾಗಿದ್ದಾಗ ಮಂಜೂರು ಮಾಡಿಸಿಕೊಂಡು ಬಂದಿದ್ದೇನೆ. ಇಂಥ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡದಿದ್ದರೆ ಹೇಗೆ ಎಂದು ಕಿಡಿಕಾರಿದರು.</p>.<p>ಐದು ಬಾರಿ ಶಾಸಕ, ಎರಡು ಬಾರಿ ಸಚಿವನಾಗಿದ್ದೇನೆ. ನನ್ನ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡದಿದ್ದರೆ ಹೇಗೆ ಆಕ್ರೋಶ ಹೊರ ಹಾಕಿದರು.</p>.<p>ಈ ವೇಳೆ ಸಚಿವ ಶ್ರೀರಾಮಲು ಅವರು ಚಿಂಚನಸೂರ ಮನವೊಲಿಸಿದರೂ ವಾಪಾಸ್ ಯಾದಗಿರಿಗೆ ತೆರಳಿದರು.</p>.<p>ಸಾರಿಗೆ ಮತ್ತು ಪರಿಶಿಷ್ಟ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಅಕ್ಟೋಬರ್ 9ರಂದು ಬೆಳಿಗ್ಗೆ 10 ಗಂಟೆ ಕಟ್ಟಡ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>