ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮಗ ಪ್ರಿಯಾಂಕ್ ಖರ್ಗೆ ವಿರುದ್ಧ ಏಕ ವಚನದಲ್ಲಿ ವಾಗ್ದಾಳಿ ಮಾಡಿದ್ದಾರೆ. ಅದನ್ನು ಮರೆತು ಪಕ್ಷಕ್ಕೆ ಯಾವ ಮುಖವನ್ನು ಇಟ್ಟುಕೊಂಡು ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಾರೆ ಎಂದು ಜನರಿಗೆ ಕಾಂಗ್ರೆಸ್ ಪಕ್ಷದ ನಾಯಕರು ಉತ್ತರ ಕೊಡಬೇಕಾಗುತ್ತದೆ ಎಂದು ಹೇಳಿದರು.
ಬಾಬುರಾವ ಚಿಂಚನಸೂರ ಅವರು ಇಡೀ ರಾಜ್ಯದ ಕೋಲಿ ಸಮಾಜದ ಜನತೆಗೆ ಅನ್ಯಾಯ ಮಾಡಿದ್ದಾರೆ. ಅವರು ತಮ್ಮ ಅಧಿಕಾರದ ದುರಾಸೆ ಸಲುವಾಗಿ ಪಕ್ಷದಿಂದ ಪಕ್ಷಕ್ಕೆ ಹೋಗುತ್ತಿದ್ದಾರೆ. ಅವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗುರಮಠಕಲ್ ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಾಯಿಬಣ್ಣ ಬಸವಂತಪುರ, ಸೂಗಪ್ಪ ನೀಲಹಳ್ಳಿ, ಹಣಮಂತ ಮೇಸ್ತರಿ ಅಚ್ಚೋಲಾ, ಮಲ್ಲಿಕಾರ್ಜುನ ಕೌಳೂರ, ನಾಗರಾಜ, ರವಿ ಕುಲಕರ್ಣಿ ಇಡ್ಲೂರ ಇದ್ದರು.