<p><strong>ಬದ್ದೇಪಲ್ಲಿ</strong>(ಸೈದಾಪುರ): ‘ಭವಿಷ್ಯತ್ತಿನ ಸದೃಡ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತಿಮುಖ್ಯ’ ಎಂದು ಶಿಕ್ಷಕ ಅಬಿನ್ ಥಾಮಸ್ ಹೇಳಿದರು.</p>.<p>ಸಮೀಪದ ಬದ್ದೇಪಲ್ಲಿ ಗ್ರಾಮದ ನೋಬಲ್ ಪಬ್ಲಿಕ್ ಇಂಗ್ಲಿಷ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>‘ಮಣ್ಣಿನ ಮುದ್ದೆಯಂತಿರುವ ಮಕ್ಕಳಿಗೆ ಅಕ್ಷರ ಜ್ಞಾನ ನೀಡಿ ಭವಿಷ್ಯತ್ತನ್ನು ಕಟ್ಟಿಕೊಡುವ ಶಿಕ್ಷಕನ ಕಾರ್ಯ ಸಾಧನೆ ಶ್ಲಾಘನೀಯವಾಗಿದೆ. ಒಬ್ಬ ಸಾಮಾನ್ಯ ಸೇವಕನಿಂದ, ರಾಷ್ಟ್ರಪತಿಯವರೆಗೆ ಎಲ್ಲರೂ ಶಿಕ್ಷಕನಿಂದ ಕಲಿತಿರುತ್ತಾರೆ. ಸಮಾಜದಲ್ಲಿ ಶಿಕ್ಷಕನಿಗೆ ಅತ್ಯಮೂಲ್ಯ ಸ್ಥಾನ ನೀಡಲಾಗಿದೆ’ ಎಂದರು.</p>.<p>ಶಿಕ್ಷಕ ಮಾಳಪ್ಪ ಪೂಜಾರಿ ಮಾತನಾಡಿದರು. ಶಿಕ್ಷಕಿ ಸಾವಿತ್ರಿ, ಸುರೇಖಾ, ಮಮತಾ, ಸುಪ್ರಿಯಾ, ನೇತ್ರಾ, ಅಕ್ಷರಾ, ರಂಜಿತಾ, ರೇಣುಕಾ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬದ್ದೇಪಲ್ಲಿ</strong>(ಸೈದಾಪುರ): ‘ಭವಿಷ್ಯತ್ತಿನ ಸದೃಡ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತಿಮುಖ್ಯ’ ಎಂದು ಶಿಕ್ಷಕ ಅಬಿನ್ ಥಾಮಸ್ ಹೇಳಿದರು.</p>.<p>ಸಮೀಪದ ಬದ್ದೇಪಲ್ಲಿ ಗ್ರಾಮದ ನೋಬಲ್ ಪಬ್ಲಿಕ್ ಇಂಗ್ಲಿಷ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>‘ಮಣ್ಣಿನ ಮುದ್ದೆಯಂತಿರುವ ಮಕ್ಕಳಿಗೆ ಅಕ್ಷರ ಜ್ಞಾನ ನೀಡಿ ಭವಿಷ್ಯತ್ತನ್ನು ಕಟ್ಟಿಕೊಡುವ ಶಿಕ್ಷಕನ ಕಾರ್ಯ ಸಾಧನೆ ಶ್ಲಾಘನೀಯವಾಗಿದೆ. ಒಬ್ಬ ಸಾಮಾನ್ಯ ಸೇವಕನಿಂದ, ರಾಷ್ಟ್ರಪತಿಯವರೆಗೆ ಎಲ್ಲರೂ ಶಿಕ್ಷಕನಿಂದ ಕಲಿತಿರುತ್ತಾರೆ. ಸಮಾಜದಲ್ಲಿ ಶಿಕ್ಷಕನಿಗೆ ಅತ್ಯಮೂಲ್ಯ ಸ್ಥಾನ ನೀಡಲಾಗಿದೆ’ ಎಂದರು.</p>.<p>ಶಿಕ್ಷಕ ಮಾಳಪ್ಪ ಪೂಜಾರಿ ಮಾತನಾಡಿದರು. ಶಿಕ್ಷಕಿ ಸಾವಿತ್ರಿ, ಸುರೇಖಾ, ಮಮತಾ, ಸುಪ್ರಿಯಾ, ನೇತ್ರಾ, ಅಕ್ಷರಾ, ರಂಜಿತಾ, ರೇಣುಕಾ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>