ಶಾಲೆ ನವೀಕರಣ: ಪ್ರಸಕ್ತ ವರ್ಷದಲ್ಲಿ ಮುಖ್ಯ ಶಿಕ್ಷಕರಾಗಿ ಅಧಿಕಾರ ವಹಿಸಿಕೊಂಡ ಗಿರೀಶ ಸೂಳಿಬಾವಿ ಅವರ ಕಾಳಜಿಯಿಂದಾಗಿ ಶಾಲೆಯನ್ನು ಸಂಪೂರ್ಣವಾಗಿ ಬಣ್ಣಗಳಿಂದ ಅಲಂಕರಿಸಿದ್ದು, ಶಾಲೆಗೆ ರೈಲಿನ ಮಾದರಿಯಲ್ಲಿ ಬಣ್ಣ ಬಳಿಯಲಾಗಿದೆ. ಇದು ನಮ್ಮ ಗ್ರಾಮದ ವಿದ್ಯಾರ್ಥಿಗಳನ್ನು ಶಾಲೆಯತ್ತ ಆಕರ್ಷಿಸುವಂತೆ ಮಾಡಿದೆ ಎಂದು ಎಸ್ಡಿಎಂಸಿ ಅಧ್ಯಕ್ಷ ಗಣಪತಿ ಪಾಟೀಲ ವಿವರಿಸಿದರು.