<p><strong>ಬದ್ದೇಪಲ್ಲಿ(ಸೈದಾಪುರ):</strong> ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಶ್ರದ್ಧಾ, ಭಕ್ತಿಯೊಂದಿಗೆ ಆಚರಣೆ ಮಾಡಿದರು.</p>.<p>ಸಮೀಪದ ಬದ್ದೇಪಲ್ಲಿ ಗ್ರಾಮದ ಈದ್ಗಾ ಮೈದಾನದಲ್ಲಿ ಸೇರಿದ ಮುಸ್ಲಿಂ ಸಮುದಾಯದ ಮಕ್ಕಳು, ಹಿರಿಯರು, ಕಿರಿಯರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.</p>.<p>ಧರ್ಮಗುರುಗಳು ಹಬ್ಬದ ಸಂದೇಶ ಸಾರಿದರು. ‘ಪ್ರವಾದಿ ಹಜರತ್ ಇಬ್ರಾಹಿಂ ಅವರ ತ್ಯಾಗ, ಬಲಿದಾನ, ಅಚಲ ದೈವಭಕ್ತಿ ಹಾಗೂ ಅವರ ಪುತ್ರ ಹಜರತ್ ಇಸ್ಮಾಯಿಲ್ ಅವರ ದೈವಭಕ್ತಿಯನ್ನು ಸಾಂಕೇತಿಕರಿಸುವ ಬಕ್ರೀದ್ ಹಬ್ಬವಾಗಿದೆ’ ಎಂದು ತಿಳಿಸಿದರು.</p>.<p>‘ಅವರು ಹಾಕಿಕೊಟ್ಟ ಮಾರ್ಗದಲ್ಲಿ ತತ್ವಾದರ್ಶಗಳನ್ನು ಪಾಲಿಸುತ್ತ ಸಾಗಬೇಕು. ಅಸಾಹಯಕರಿಗೆ ನಮ್ಮ ಕೈಲಾದಷ್ಟು ಸಹಾಯ, ಸಹಕಾರ ನೀಡುವ ಮನೋಭಾವವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಎಲ್ಲರೊಂದಿಗೆ ಸಹೋದರರಂತೆ ಬಾಳಬೇಕು’ ಎಂದರು.</p>.<p>ಪ್ರಾರ್ಥನೆ ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಕೆಲವರು ಅಸಹಾಯಕರಿಗೆ ಬಟ್ಟೆ, ಧನಸಹಾಯ ಮಾಡಿದರು.</p>.<p>ಸೈದಾಪುರ, ಕೊಂಡಾಪುರ, ಕಡೇಚೂರು, ಚಂದಾಪುರ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮುಸ್ಲಿಮರು ಹೊಸ ಉಡುಪುಗಳನ್ನು ಧರಿಸಿ ಬಕ್ರೀದ್ ಆಚರಿಸಿದರು. ಮನೆಯಲ್ಲಿ ಹಾಲಿನಿಂದ ತಯಾರಿಸಿದ ಸುರಕುಂಬ ಪಾಯಸವನ್ನು ಆಪ್ತರಿಗೆ, ಸ್ನೇಹಿತರಿಗೆ, ಮನೆಯ ನೆರೆಹೊರೆಯವರಿಗೆ ಹಂಚಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬದ್ದೇಪಲ್ಲಿ(ಸೈದಾಪುರ):</strong> ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಶ್ರದ್ಧಾ, ಭಕ್ತಿಯೊಂದಿಗೆ ಆಚರಣೆ ಮಾಡಿದರು.</p>.<p>ಸಮೀಪದ ಬದ್ದೇಪಲ್ಲಿ ಗ್ರಾಮದ ಈದ್ಗಾ ಮೈದಾನದಲ್ಲಿ ಸೇರಿದ ಮುಸ್ಲಿಂ ಸಮುದಾಯದ ಮಕ್ಕಳು, ಹಿರಿಯರು, ಕಿರಿಯರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.</p>.<p>ಧರ್ಮಗುರುಗಳು ಹಬ್ಬದ ಸಂದೇಶ ಸಾರಿದರು. ‘ಪ್ರವಾದಿ ಹಜರತ್ ಇಬ್ರಾಹಿಂ ಅವರ ತ್ಯಾಗ, ಬಲಿದಾನ, ಅಚಲ ದೈವಭಕ್ತಿ ಹಾಗೂ ಅವರ ಪುತ್ರ ಹಜರತ್ ಇಸ್ಮಾಯಿಲ್ ಅವರ ದೈವಭಕ್ತಿಯನ್ನು ಸಾಂಕೇತಿಕರಿಸುವ ಬಕ್ರೀದ್ ಹಬ್ಬವಾಗಿದೆ’ ಎಂದು ತಿಳಿಸಿದರು.</p>.<p>‘ಅವರು ಹಾಕಿಕೊಟ್ಟ ಮಾರ್ಗದಲ್ಲಿ ತತ್ವಾದರ್ಶಗಳನ್ನು ಪಾಲಿಸುತ್ತ ಸಾಗಬೇಕು. ಅಸಾಹಯಕರಿಗೆ ನಮ್ಮ ಕೈಲಾದಷ್ಟು ಸಹಾಯ, ಸಹಕಾರ ನೀಡುವ ಮನೋಭಾವವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಎಲ್ಲರೊಂದಿಗೆ ಸಹೋದರರಂತೆ ಬಾಳಬೇಕು’ ಎಂದರು.</p>.<p>ಪ್ರಾರ್ಥನೆ ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಕೆಲವರು ಅಸಹಾಯಕರಿಗೆ ಬಟ್ಟೆ, ಧನಸಹಾಯ ಮಾಡಿದರು.</p>.<p>ಸೈದಾಪುರ, ಕೊಂಡಾಪುರ, ಕಡೇಚೂರು, ಚಂದಾಪುರ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮುಸ್ಲಿಮರು ಹೊಸ ಉಡುಪುಗಳನ್ನು ಧರಿಸಿ ಬಕ್ರೀದ್ ಆಚರಿಸಿದರು. ಮನೆಯಲ್ಲಿ ಹಾಲಿನಿಂದ ತಯಾರಿಸಿದ ಸುರಕುಂಬ ಪಾಯಸವನ್ನು ಆಪ್ತರಿಗೆ, ಸ್ನೇಹಿತರಿಗೆ, ಮನೆಯ ನೆರೆಹೊರೆಯವರಿಗೆ ಹಂಚಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>