<p><strong>ಕಕ್ಕೇರಾ:</strong> ‘ಪಟ್ಟಣದ ಸಮೀಪದ ಬಂಡೊಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ ಅವರು ಸರ್ಕಾರದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷ ಸಾಬಯ್ಯ ಗೋನಾಲ ಆರೋಪಿಸಿದ್ದಾರೆ.</p>.<p>‘ಸರ್ಕಾರಿ ಶಾಲೆ ಕಟ್ಟಡ ಶಿಥಿಲಗೊಂಡಿರುತ್ತದೆ. ಕಟ್ಟಡಕ್ಕೆ ಸುಣ್ಣ ಬಣ್ಣವಿಲ್ಲ, ಸಮರ್ಪಕ ಕಲಿಕೆಯಿಲ್ಲ, ಕಲಿಕಾ ಸಾಮಗ್ರಿ, ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ಹೀಗೆ ಹಲವಾರು ವರ್ಷಗಳಿಂದ ಬಂದಂತಹ ಹಣದ ಖರ್ಚು ವೆಚ್ಚಗಳ ಮಾಹಿತಿಯಿಲ್ಲ’ ಎಂದು ದೂರಿದ್ದಾರೆ.</p>.<p>‘ವಿದ್ಯಾರ್ಥಿಗಳ ದಾಖಲಾತಿ 86 ಇದ್ದು, ಹಾಜರಾತಿ 35 ಮಾತ್ರ. ಉಳಿದ ಮಕ್ಕಳ ಪೌಷ್ಠಿಕ ಆಹಾರ ದುರ್ಬಳಕೆ ಮಾಡುತ್ತಿದ್ದು, ಇದರ ಸೂಕ್ತ ದಾಖಲಾತಿಗಳೊಂದಿಗೆ ಬಿಇಒ ಅವರಿಗೆ ಮನವಿ ಮಾಡಿ ವಾರ ಕಳೆದರೂ, ಪ್ರಯೋಜನವಾಗಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಒಂದು ವಾರದೊಳಗೆ ಸೂಕ್ತ ದಾಖಲಾತಿಗಳನ್ನು ಅಧಿಕಾರಿಗಳು ಪರೀಶಿಲನೆ ಮಾಡಿ, ಮುಖ್ಯಶಿಕ್ಷಕಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.</p>.<div><blockquote>ನಮ್ಮ ಶಾಲೆಯಲ್ಲಿ ಯಾವುದೇ ಹಣ ದುರ್ಬಳಕೆಯಾಗಿಲ್ಲ. ಪ್ರತಿಯೊಂದಕ್ಕೂ ದಾಖಲೆಯಿದೆ. ನಾನು ಯಾವುದೇ ತಪ್ಪು ಮಾಡಿಲ್ಲ </blockquote><span class="attribution">ವಿಜಯಲಕ್ಷ್ಮಿ ಮುಖ್ಯಶಿಕ್ಷಕಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಕ್ಕೇರಾ:</strong> ‘ಪಟ್ಟಣದ ಸಮೀಪದ ಬಂಡೊಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ ಅವರು ಸರ್ಕಾರದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷ ಸಾಬಯ್ಯ ಗೋನಾಲ ಆರೋಪಿಸಿದ್ದಾರೆ.</p>.<p>‘ಸರ್ಕಾರಿ ಶಾಲೆ ಕಟ್ಟಡ ಶಿಥಿಲಗೊಂಡಿರುತ್ತದೆ. ಕಟ್ಟಡಕ್ಕೆ ಸುಣ್ಣ ಬಣ್ಣವಿಲ್ಲ, ಸಮರ್ಪಕ ಕಲಿಕೆಯಿಲ್ಲ, ಕಲಿಕಾ ಸಾಮಗ್ರಿ, ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ಹೀಗೆ ಹಲವಾರು ವರ್ಷಗಳಿಂದ ಬಂದಂತಹ ಹಣದ ಖರ್ಚು ವೆಚ್ಚಗಳ ಮಾಹಿತಿಯಿಲ್ಲ’ ಎಂದು ದೂರಿದ್ದಾರೆ.</p>.<p>‘ವಿದ್ಯಾರ್ಥಿಗಳ ದಾಖಲಾತಿ 86 ಇದ್ದು, ಹಾಜರಾತಿ 35 ಮಾತ್ರ. ಉಳಿದ ಮಕ್ಕಳ ಪೌಷ್ಠಿಕ ಆಹಾರ ದುರ್ಬಳಕೆ ಮಾಡುತ್ತಿದ್ದು, ಇದರ ಸೂಕ್ತ ದಾಖಲಾತಿಗಳೊಂದಿಗೆ ಬಿಇಒ ಅವರಿಗೆ ಮನವಿ ಮಾಡಿ ವಾರ ಕಳೆದರೂ, ಪ್ರಯೋಜನವಾಗಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಒಂದು ವಾರದೊಳಗೆ ಸೂಕ್ತ ದಾಖಲಾತಿಗಳನ್ನು ಅಧಿಕಾರಿಗಳು ಪರೀಶಿಲನೆ ಮಾಡಿ, ಮುಖ್ಯಶಿಕ್ಷಕಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.</p>.<div><blockquote>ನಮ್ಮ ಶಾಲೆಯಲ್ಲಿ ಯಾವುದೇ ಹಣ ದುರ್ಬಳಕೆಯಾಗಿಲ್ಲ. ಪ್ರತಿಯೊಂದಕ್ಕೂ ದಾಖಲೆಯಿದೆ. ನಾನು ಯಾವುದೇ ತಪ್ಪು ಮಾಡಿಲ್ಲ </blockquote><span class="attribution">ವಿಜಯಲಕ್ಷ್ಮಿ ಮುಖ್ಯಶಿಕ್ಷಕಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>