<p><strong>ಸುರಪುರ</strong>: ‘ಕತೆಗಾರ್ತಿ ಬಾನು ಮುಸ್ತಾಕ್ ಬೂಕರ್ ಪ್ರಶಸ್ತಿ ಪಡೆಯುವ ಮೂಲಕ ಜಾಗತಿಕ ಮಟ್ಟದಲ್ಲಿ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ’ ಎಂದು ಶಾಸನ ಸಂಶೋಧಕ ಎಂ.ಎಸ್. ಶಿರವಾಳ ಹೇಳಿದರು.</p>.<p>ತಾಲ್ಲೂಕಿನ ಕೃಷ್ಣಾಪುರದ ಕರ್ನಾಟಕ ಅನುದಾನಿತ ಪ್ರೌಢಶಾಲೆಯಲ್ಲಿ ರಂಗಂಪೇಟೆಯ ಅಂಬೇಡ್ಕರ್ ಪದವಿ ಕಾಲೇಜು ಏರ್ಪಡಿಸಿದ್ದ ಎನ್ಎಸ್ಎಸ್ ಶಿಬಿರದಲ್ಲಿ ಬುಧವಾರ ಕರ್ನಾಟಕ ಸಾಹಿತ್ಯ ಅಕಾಡೆಮಿ ಏರ್ಪಡಿಸಿದ್ದ ‘ಚಕೋರ’ ಸಾಹಿತ್ಯ ವಿಚಾರ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯುವ ಜನತೆ ಕಾವ್ಯ ಕಟ್ಟುವ ಪಕ್ವತೆಯನ್ನು ಬೆಳೆಸಿಕೊಳ್ಳಬೇಕು. ಹೆಚ್ಚುಹೆಚ್ಚು ಸಾಹಿತ್ಯ ಓದಬೇಕು. ಉತ್ತಮ ಸಾಹಿತ್ಯ ಬರೆಯುವುದರ ಮೂಲಕ ಬೆಳೆಯಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಅಕಾಡೆಮಿ ಸದಸ್ಯ ಸಿದ್ದರಾಮ ಹೊನ್ಕಲ್, ‘ಚಕೋರ ಕಾರ್ಯಕ್ರಮದ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಾಹಿತ್ಯದ ಆಸಕ್ತಿ ಮೂಡಿಸಲಾಗುತ್ತಿದೆ’ ಎಂದರು.</p>.<p>ಉಪನ್ಯಾಸಕ ಶರಣಗೌಡ ಪಾಟೀಲ ಮಾತನಾಡಿ, ‘ಬಾನು ಮುಸ್ತಾಕ್ ಅವರ ‘ಹಣತೆ’ ಮತ್ತು ‘ಹಸಿನಾ’ ಕತೆಗಳ ಸಂಕಲನ ವಿಶ್ವದಲ್ಲಿ ಸಂಚಲನ ಮೂಡಿಸಿವೆ. ಯುವ ಸಾಹಿತಿಗಳು ಅವರನ್ನು ಆದರ್ಶವನ್ನಾಗಿ ಇಟ್ಟುಕೊಂಡು ಸಾಹಿತ್ಯದಲ್ಲಿ ಕೃಷಿ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ನಾಗಣ್ಣ ಪುಜಾರಿ ಮಾತನಾಡಿದರು.</p>.<p>ಉಮಾದೇವಿ ಮಟ್ಟಿ ಸ್ವಾಗತಿಸಿದರು. ಸಿ.ದೊಡ್ಡಮನಿ ನಿರೂಪಿಸಿದರು. ಚಂದ್ರಶೇಖರ ಡೋಲೆ ವಂದಿಸಿದರು.</p>.<p>ಈಶ್ವರಪ್ಪ ತಳವಾರ, ಶಂಕ್ರಪ್ಪ ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ಕತೆಗಾರ್ತಿ ಬಾನು ಮುಸ್ತಾಕ್ ಬೂಕರ್ ಪ್ರಶಸ್ತಿ ಪಡೆಯುವ ಮೂಲಕ ಜಾಗತಿಕ ಮಟ್ಟದಲ್ಲಿ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ’ ಎಂದು ಶಾಸನ ಸಂಶೋಧಕ ಎಂ.ಎಸ್. ಶಿರವಾಳ ಹೇಳಿದರು.</p>.<p>ತಾಲ್ಲೂಕಿನ ಕೃಷ್ಣಾಪುರದ ಕರ್ನಾಟಕ ಅನುದಾನಿತ ಪ್ರೌಢಶಾಲೆಯಲ್ಲಿ ರಂಗಂಪೇಟೆಯ ಅಂಬೇಡ್ಕರ್ ಪದವಿ ಕಾಲೇಜು ಏರ್ಪಡಿಸಿದ್ದ ಎನ್ಎಸ್ಎಸ್ ಶಿಬಿರದಲ್ಲಿ ಬುಧವಾರ ಕರ್ನಾಟಕ ಸಾಹಿತ್ಯ ಅಕಾಡೆಮಿ ಏರ್ಪಡಿಸಿದ್ದ ‘ಚಕೋರ’ ಸಾಹಿತ್ಯ ವಿಚಾರ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯುವ ಜನತೆ ಕಾವ್ಯ ಕಟ್ಟುವ ಪಕ್ವತೆಯನ್ನು ಬೆಳೆಸಿಕೊಳ್ಳಬೇಕು. ಹೆಚ್ಚುಹೆಚ್ಚು ಸಾಹಿತ್ಯ ಓದಬೇಕು. ಉತ್ತಮ ಸಾಹಿತ್ಯ ಬರೆಯುವುದರ ಮೂಲಕ ಬೆಳೆಯಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಅಕಾಡೆಮಿ ಸದಸ್ಯ ಸಿದ್ದರಾಮ ಹೊನ್ಕಲ್, ‘ಚಕೋರ ಕಾರ್ಯಕ್ರಮದ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಾಹಿತ್ಯದ ಆಸಕ್ತಿ ಮೂಡಿಸಲಾಗುತ್ತಿದೆ’ ಎಂದರು.</p>.<p>ಉಪನ್ಯಾಸಕ ಶರಣಗೌಡ ಪಾಟೀಲ ಮಾತನಾಡಿ, ‘ಬಾನು ಮುಸ್ತಾಕ್ ಅವರ ‘ಹಣತೆ’ ಮತ್ತು ‘ಹಸಿನಾ’ ಕತೆಗಳ ಸಂಕಲನ ವಿಶ್ವದಲ್ಲಿ ಸಂಚಲನ ಮೂಡಿಸಿವೆ. ಯುವ ಸಾಹಿತಿಗಳು ಅವರನ್ನು ಆದರ್ಶವನ್ನಾಗಿ ಇಟ್ಟುಕೊಂಡು ಸಾಹಿತ್ಯದಲ್ಲಿ ಕೃಷಿ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ನಾಗಣ್ಣ ಪುಜಾರಿ ಮಾತನಾಡಿದರು.</p>.<p>ಉಮಾದೇವಿ ಮಟ್ಟಿ ಸ್ವಾಗತಿಸಿದರು. ಸಿ.ದೊಡ್ಡಮನಿ ನಿರೂಪಿಸಿದರು. ಚಂದ್ರಶೇಖರ ಡೋಲೆ ವಂದಿಸಿದರು.</p>.<p>ಈಶ್ವರಪ್ಪ ತಳವಾರ, ಶಂಕ್ರಪ್ಪ ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>