<p><strong>ಕೊಂಡಾಪುರ (ಸೈದಾಪುರ): </strong>ಬಸವಣ್ಣನವರು ಕ್ರಾಂತಿಕಾರಕ ವಚನಗಳ ಮೂಲಕ ಸಾಮಾಜಿಕ ಅರಿವು ಮೂಡಿಸಿದ ವಿಶ್ವಗುರು ಎಂದು ಮುಖಂಡ ಭೀಮಣ್ಣ ವಡವಟ್ ತಿಳಿಸಿದರು.</p>.<p>ಸಮೀಪದ ಕೊಂಡಾಪುರ ಗ್ರಾಮದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಪ್ರಗತಿ ಕೇಂದ್ರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಸವಣ್ಣ ಜಗತ್ತು ಕಂಡ ಅಪರೂಪದ ಕಾಯಕಯೋಗಿ. ತಮ್ಮ ವಚನಗಳಿಂದಲೇ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಪ್ರಯತ್ನಿಸಿದರು. ಸ್ತ್ರೀ ಸಮಾನತೆಗಾಗಿ ಮಹತ್ವ ಕೊಟ್ಟರು. ಅನುಭವ ಮಂಟಪವನ್ನು ನಿರ್ಮಿಸಿ ಇಲ್ಲಿ ಎಲ್ಲಾ ಸಾಮಾಜಿಕ, ಆರ್ಥಿಕ ಹಿನ್ನಲೆಯ ಪುರುಷ-ಮಹಿಳೆಯರು ಆಧ್ಯಾತ್ಮಿಕ ಮತ್ತು ಪ್ರಾಪಂಚಿಕ ಪ್ರಶ್ನೆಗಳನ್ನು ಮುಕ್ತವಾಗಿ ಚರ್ಚೆ ಮಾಡಲು ಅವಕಾಶ ಕಲ್ಪಿಸಿದರು ಎಂದರು.</p>.<p>ಇವನಾರವ ಇವನಾರವ ಎನ್ನದೇ ಎಲ್ಲರೂ ನಮ್ಮವರೇ ಎನ್ನುವ ಮೂಲಕ ಸಮಾನತೆಯ ಮಂತ್ರ ಪಠಿಸಿದರು. ಯುವಕರು ಬಸವಣ್ಣನವರು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ತಪ್ಪದೇ ಪಾಲಿಸಬೇಕು. ಹಿರಿಯರ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.</p>.<p>ಭದ್ರಪ್ಪ ಬಾಗ್ಲಿ, ನಾಗೇಶ ತೆಲಗು, ಮಹೇಶ ವಡವಟ್, ಪ್ರಗತಿ ಕೇಂದ್ರದ ನಿರ್ವಾಹಕಿ ಶಿವಾಲೀಲಾ ದೇವು ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಂಡಾಪುರ (ಸೈದಾಪುರ): </strong>ಬಸವಣ್ಣನವರು ಕ್ರಾಂತಿಕಾರಕ ವಚನಗಳ ಮೂಲಕ ಸಾಮಾಜಿಕ ಅರಿವು ಮೂಡಿಸಿದ ವಿಶ್ವಗುರು ಎಂದು ಮುಖಂಡ ಭೀಮಣ್ಣ ವಡವಟ್ ತಿಳಿಸಿದರು.</p>.<p>ಸಮೀಪದ ಕೊಂಡಾಪುರ ಗ್ರಾಮದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಪ್ರಗತಿ ಕೇಂದ್ರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಸವಣ್ಣ ಜಗತ್ತು ಕಂಡ ಅಪರೂಪದ ಕಾಯಕಯೋಗಿ. ತಮ್ಮ ವಚನಗಳಿಂದಲೇ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಪ್ರಯತ್ನಿಸಿದರು. ಸ್ತ್ರೀ ಸಮಾನತೆಗಾಗಿ ಮಹತ್ವ ಕೊಟ್ಟರು. ಅನುಭವ ಮಂಟಪವನ್ನು ನಿರ್ಮಿಸಿ ಇಲ್ಲಿ ಎಲ್ಲಾ ಸಾಮಾಜಿಕ, ಆರ್ಥಿಕ ಹಿನ್ನಲೆಯ ಪುರುಷ-ಮಹಿಳೆಯರು ಆಧ್ಯಾತ್ಮಿಕ ಮತ್ತು ಪ್ರಾಪಂಚಿಕ ಪ್ರಶ್ನೆಗಳನ್ನು ಮುಕ್ತವಾಗಿ ಚರ್ಚೆ ಮಾಡಲು ಅವಕಾಶ ಕಲ್ಪಿಸಿದರು ಎಂದರು.</p>.<p>ಇವನಾರವ ಇವನಾರವ ಎನ್ನದೇ ಎಲ್ಲರೂ ನಮ್ಮವರೇ ಎನ್ನುವ ಮೂಲಕ ಸಮಾನತೆಯ ಮಂತ್ರ ಪಠಿಸಿದರು. ಯುವಕರು ಬಸವಣ್ಣನವರು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ತಪ್ಪದೇ ಪಾಲಿಸಬೇಕು. ಹಿರಿಯರ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.</p>.<p>ಭದ್ರಪ್ಪ ಬಾಗ್ಲಿ, ನಾಗೇಶ ತೆಲಗು, ಮಹೇಶ ವಡವಟ್, ಪ್ರಗತಿ ಕೇಂದ್ರದ ನಿರ್ವಾಹಕಿ ಶಿವಾಲೀಲಾ ದೇವು ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>