16ರಂದು ಬೆಳಗಾವಿಯಲ್ಲಿ ನಾವು ಕರೆದಿದ್ದ ಸಮುದಾಯದ ಹಾಲಿ, ಮಾಜಿ ಶಾಸಕರ ಸಭೆಗೆ ಖುದ್ದಾಗಿ ಮುಖ್ಯಮಂತ್ರಿಗಳೇ ಆಗಮಿಸಿ ಸಮುದಾಯವನ್ನು 2ಎ ಸೇರ್ಪಡೆ ಮಾಡಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಂಚಮಸಾಲಿಯ ದೀಕ್ಷಾದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ, ಅವರಿಗೆ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ನಾವು ಜಾಗೃತಿ ಮೂಡಿಸಲು ಮುಂದಿನ ದಿನಗಳಲ್ಲಿ ಅಭಿಯಾನ ಕೈಗೊಳ್ಳಲಿದ್ದೇವೆ ಎಂದು ಮಾಹಿತಿ ನೀಡಿದರು.