ಹುಣಸಗಿ (ಯಾದಗಿರಿ): ಕೃಷ್ಣಾ ಅಚ್ಚುಕಟ್ಟು ಪ್ರದೇಶದ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಯಿಂದ ಮಂಗಳವಾರದಿಂದ ನೀರು ಹರಿ ಬಿಡಲಾಯಿತು.
ಮುಂಗಾರು ಹಂಗಾಮಿನ ಬೆಳೆಗಳಿಗೆ ಜುಲೈ 20 ರಿಂದ ನೀರು ಹರಿಸಲಾಗುತ್ತಿದೆ.
ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೊಡಿ ಗೇಟ್ಗಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು.
'ನದಿ ಪಾತ್ರದಲ್ಲಿರುವ ಗ್ರಾಮಗಳ ಸಾವಿರಾರು ರೈತರ ತ್ಯಾಗದ ಫಲವಾಗಿ ಇಂದು ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಜಿಲ್ಲೆಗಳಿಗೆ ಬೃಹತ್ ನೀರಾವರಿ ಒದಗಿಸಲಾಗುತ್ತದೆ. ರೈತರು ನೀರನ್ನು ಹಿತವಾಗಿ ಮತ್ತು ಮಿತವಾಗಿ ಬಳಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು' ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯಕುಮಾರ್ ಅರಳಿ ಸೇರಿದಂತೆ ಗೇಟ್ನ ಅಧಿಕಾರಿಗಳು ಇದ್ದರು.