<p><strong>ಶಹಾಪುರ</strong>: ‘ವಿಶ್ವಗುರು ಬಸವಣ್ಣನವರು 12ನೇ ಶತಮಾನದಲ್ಲಿ ನಿರ್ಭೀತಿಯಿಂದ ಬದುಕಲು ಕಲಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುಂದೆ ಸಾಗಬೇಕು. ವಿದ್ಯಾರ್ಥಿಗಳು ಪ್ರಶ್ನೆ ಮಾಡುವುದನ್ನು ಕಲಿಯಬೇಕು’ ಎಂದು ಶರಣ ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟ ತಿಳಿಸಿದರು.</p>.<p>ತಾಲ್ಲೂಕಿನ ಸಗರ ಗ್ರಾಮದಲ್ಲಿ ಸುಬೇದಾರ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಶಾಲೆಯಿಂದ ಶಾಲೆಗೆ ಸಾಂಸ್ಕೃತಿಕ ನಾಯಕ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಗುರುಗಳಲ್ಲಿ ವಿಶ್ವಾಸವಿಟ್ಟು ವಿದ್ಯೆ ಕಲಿಯಬೇಕು. ಶಿಕ್ಷಣ ಕಣ್ಣ ಮುಂದಿನ ಬೆಳಕು. ಬಸವಾದಿ ಶರಣರ ಚಿಂತನೆಗಳನ್ನು ಅಳವಡಿಸಿಕೊಂಡು ಉತ್ತಮ ನಾಗರಿಕ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು’ ಎಂದರು.</p>.<p>ಸಂಸ್ಥೆಯ ಅಧ್ಯಕ್ಷ ಕರಣ ಸುಬೇದಾರ, ದತ್ತಾತ್ರೇಯ ಕುಲಕರ್ಣಿ, ಶಿವಕುಮಾರ ಅಕ್ಕಿ, ಪ್ರಿಯಾಂಕ ಚವ್ಹಾಣ, ವೇದಾ ನಾಯಕ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ</strong>: ‘ವಿಶ್ವಗುರು ಬಸವಣ್ಣನವರು 12ನೇ ಶತಮಾನದಲ್ಲಿ ನಿರ್ಭೀತಿಯಿಂದ ಬದುಕಲು ಕಲಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುಂದೆ ಸಾಗಬೇಕು. ವಿದ್ಯಾರ್ಥಿಗಳು ಪ್ರಶ್ನೆ ಮಾಡುವುದನ್ನು ಕಲಿಯಬೇಕು’ ಎಂದು ಶರಣ ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟ ತಿಳಿಸಿದರು.</p>.<p>ತಾಲ್ಲೂಕಿನ ಸಗರ ಗ್ರಾಮದಲ್ಲಿ ಸುಬೇದಾರ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಶಾಲೆಯಿಂದ ಶಾಲೆಗೆ ಸಾಂಸ್ಕೃತಿಕ ನಾಯಕ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಗುರುಗಳಲ್ಲಿ ವಿಶ್ವಾಸವಿಟ್ಟು ವಿದ್ಯೆ ಕಲಿಯಬೇಕು. ಶಿಕ್ಷಣ ಕಣ್ಣ ಮುಂದಿನ ಬೆಳಕು. ಬಸವಾದಿ ಶರಣರ ಚಿಂತನೆಗಳನ್ನು ಅಳವಡಿಸಿಕೊಂಡು ಉತ್ತಮ ನಾಗರಿಕ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು’ ಎಂದರು.</p>.<p>ಸಂಸ್ಥೆಯ ಅಧ್ಯಕ್ಷ ಕರಣ ಸುಬೇದಾರ, ದತ್ತಾತ್ರೇಯ ಕುಲಕರ್ಣಿ, ಶಿವಕುಮಾರ ಅಕ್ಕಿ, ಪ್ರಿಯಾಂಕ ಚವ್ಹಾಣ, ವೇದಾ ನಾಯಕ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>