ಹುಣಸಗಿ: ತಾಲ್ಲೂಕಿನ ನಾರಾಯಣಪುರ ಬಸವಸಾಗರಕ್ಕೆ ಬುಧವಾರವೂ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದರಿಂದಾಗಿ 28 ಮುಖ್ಯ ಕ್ರಸ್ಟ್ಗೇಟ್ಗಳ ಮೂಲಕ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ.
ಕೃಷ್ಣೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರಿಂದಾಗಿ ಜಲಾಶಯದ ಮಟ್ಟ ಕಾಯ್ದುಕೊಂಡು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.
ಕಳೆದ ನಾಲ್ಕು ದಿನದಿಂದಲೂ ಈ ನೀರಿನ ಹರಿವಿನ ಪ್ರಮಾಣ ಏರುಮುಖವಾಗಿದ್ದು, ಬುಧವಾರ ಸಂಜೆ 2.70 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಇದರಿಂದಾಗಿ ಜಲಾಶಯದ ಮಟ್ಟ 489.89 ಮೀಟರ್ ಕಾಯ್ದುಕೊಂಡು 2.94 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.
ಇದರಿಂದಾಗಿ ಅಲ್ಲಲ್ಲಿ ನದಿ ತೀರದಲ್ಲಿರುವ ಹೊಲ ಗದ್ದೆಗಳಿಗೆ ನೀರು ನುಗ್ಗಿದ್ದು, ನೀರಿನ ಹರಿವು ಕಡಿಮೆಯಾದ ಬಳಿಕವಷ್ಟೇ ಹಾನಿಯ ಅಂದಾಜು ಲಭ್ಯವಾಗಲಿದೆ.