ವಿಜಯಲಕ್ಷ್ಮಿಆಸ್ಪತ್ರೆಯ ನೇತ್ರ ತಜ್ಞ ಡಾ.ಸಮೀನಾ ನೀಲಕಂಠ ಸೈದಾಪುರ ಮಾತನಾಡಿ, ‘ಗ್ಲಾಕೋಮಾ ರೋಗವು ತಿಳಿಯದ ರೀತಿಯಲ್ಲಿ ಬಂದು ಕಣ್ಣಿನ ನರಗಳನ್ನು ನಿಶ್ಯಕ್ತಗೊಳಿಸಿ, ದೃಷ್ಟಿ ದೋಷ ಕಡಿಮೆ ಮಾಡುತ್ತದೆ. ಈ ದೃಷ್ಟಿದೋಷವು ಹುಟ್ಟಿನಿಂದ ವೃದ್ಧರವರೆಗೂ ಬರಬಹುದು. ಪ್ರತಿಯೊಬ್ಬರೂ ವರ್ಷಕ್ಕೊಮ್ಮೆ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದರು.