‘ಜೂನ್ 12ಕ್ಕೆ ಪರೀಕ್ಷೆಗಳು ಮುಗಿಯುತ್ತವೆ. ಅಲ್ಲಿಯವರೆಗೆ ಕನಿಷ್ಠ 15 ಕೇಂದ್ರಗಳಿಗೆ ಭೇಟಿ ನೀಡುವೆ. ಅಕ್ರಮಗಳು ಆಗದಂತೆ ತಡೆಯಲು ಈ ಕ್ರಮಕೈಗೊಂಡಿದ್ದೇನೆ. ರಾಮನಗರ ಜಿಲ್ಲಾ ವ್ಯಾಪ್ತಿಗೆ ಯಾರೂ ಪರಿಶೀಲನೆಗೆ ಬರುವುದಿಲ್ಲ ಎಂದು ಹೇಳಲಾಗುತ್ತಿತ್ತು. ಅದನ್ನು ಸಹ ಹೋಗಲಾಡಿಸಲು ಕನಕಪುರ, ಮಾಗಡಿ, ರಾಮನಗರದ ಸುತ್ತಮುತ್ತಲಿನ ಪರೀಕ್ಷಾ ಕೇಂದ್ರಗಳಿಗೂ ಭೇಟಿ ಮಾಡುತ್ತೇನೆ’ ಎಂದು ತಿಳಿಸಿದರು.