ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: 'ಶೈಕ್ಷಣಿಕ ಪ್ರಗತಿಯಿಂದ ಉತ್ತಮ ಸಮಾಜ ನಿರ್ಮಾಣ'

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಜಿ.ಪಂ ಅಧ್ಯಕ್ಷ ಬಸನಗೌಡ ಯಡಿಯಾಪುರ ಅಭಿಮತ
Last Updated 7 ಸೆಪ್ಟೆಂಬರ್ 2020, 16:15 IST
ಅಕ್ಷರ ಗಾತ್ರ

ಯಾದಗಿರಿ: ‘ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಲು ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಹೆಚ್ಚಿನ ಒತ್ತು ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಹೇಳಿದರು.

ನಗರದ ಮೆಥೋಡಿಸ್ಟ್ ಚರ್ಚ್ ಕೆಎನ್‌ಎಚ್ ಹಾಲ್‍ನಲ್ಲಿ ಸೋಮವಾರಜಿಲ್ಲಾ ಪಂಚಾಯಿತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಮಾತನಾಡಿ, ‘ಮಕ್ಕಳ ಭವಿಷ್ಯ ರೂಪಿಸಿ ಅಮೂಲ್ಯ ರತ್ನಗಳನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸದಿಂದ ಸ್ವಾವಲಂಬಿಯಾಗಿ ಬದುಕಲು ಕಲಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ ಮಾತನಾಡಿದರು.

ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸಿದ ಸ್ಕೌಟ್ಸ್ ಮತ್ತು ಗೈಡ್ಸ್ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಡಿಡಿಪಿಐ ಶ್ರೀನಿವಾಸರಡ್ಡಿ, ಡಯಟ್ ಕಾಲೇಜಿನ ಪ್ರಾಂಶುಪಾಲ ನಾಗರತ್ನ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರಡ್ಡಿ ಪಾಟೀಲ, ಶಿಕ್ಷಣಾಧಿಕಾರಿ ಚಂದ್ರಕಾಂತ ರಡ್ಡಿ, ಹಳ್ಳೆಪ್ಪ, ಅಶೋಕ ಕೆಂಭಾವಿ, ಲಕ್ಷ್ಮಿಕಾಂತ ರೆಡ್ಡಿ ಇದ್ದರು. ಸಂಗೀತ ಶಿಕ್ಷಕ ಶರಣಬಸವ ವಠಾರ ನಾಡಗೀತೆ ಹಾಡಿ ದರು. ಮಲ್ಲಿಕಾರ್ಜುನ ವಂದಿಸಿದರು.

***

ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ. ಗುರು ನಿರಂತರವಾಗಿ ಓದುಗನಾಗಿರಬೇಕು ಅಂದಾಗ ಮಾತ್ರ ಶಿಷ್ಯರೂ ನಿರಂತರ ಓದುಗರಾಗಿರುತ್ತಾರೆ

-ಡಾ.ರಾಗಪ್ರಿಯಾ ಆರ್.,ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT