ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಪರೋಕ್ಷವಾಗಿ ಸಮರ್ಥನೆ ಮಾಡಿಕೊಂಡ ಸಿಎಂ

Last Updated 19 ಮಾರ್ಚ್ 2022, 8:06 IST
ಅಕ್ಷರ ಗಾತ್ರ

ದೇವತ್ಕಲ್ (ಯಾದಗಿರಿ): ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆಗೆ ಪರೋಕ್ಷವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥನೆ ಮಾಡಿಕೊಂಡರು.

ಸುರಪುರ ತಾಲ್ಲೂಕಿನ ದೇವತ್ಕಲ್ ಗ್ರಾಮದ ಹೆಲಿಪ್ಯಾಡ್ ಬಳಿ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಗುಜರಾತಿನಲ್ಲಿ ಭಗವದ್ಗೀತೆ ಅಳವಡಿಕೆ ಮಾಡಲಾಗಿದ್ದು, ಇದರಿಂದ ಮಕ್ಕಳಲ್ಲಿ ನೈತಿಕತೆ ಬೆಳೆಯಲಿದೆ ಎಂದು ಹೇಳಿದರು.

ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ಗುಜರಾತ್ ರಾಜ್ಯದಲ್ಲಿ ಆಗಿದೆ. ಭಗವದ್ಗೀತೆ ಅಳವಡಿಸಿದರೇ ಮಕ್ಕಳಿಗೆ ಅನುಕೂಲವಾಗುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳಲ್ಲಿ ನೈತಿಕತೆ ಬೆಳೆಸುವುದು ಅಗತ್ಯವಿದೆ. ಹೀಗಾಗಿಯೇ ಈ ವಿಚಾರದಲ್ಲಿ ಅನಗತ್ಯವಾಗಿ ಗೊಂದಲ ಮೂಡಿಸಬಾರದು ಎಂದರು.

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೇ ಬೌದ್ಧಿಕ ಮಟ್ಟ ಸುಧಾರಣೆ ಆಗುತ್ತದೆ. ಇದರಲ್ಲಿ ತಪ್ಪು ಏನಿದೆ. ನಮ್ಮಲ್ಲಿಯೂ ಅಳವಡಿಕೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅವರು ಮೊದಲು ವರದಿ ನೀಡಲಿ. ನಾನು ಸೂಕ್ತವಾಗಿ ನಿರ್ಧಾರ ಕೈಗೊಳ್ಳುತ್ತೇನೆ.

ವ್ಯಕ್ತಿತ್ವ ವಿಕಸನ ಮಾಡುವುದೇ ಸರ್ಕಾರದ ಪ್ರಮುಖವಾದ ಗುರಿಯಾಗಿದೆ. ಆ ನಿಟ್ಟಿಯಲ್ಲಿ ಸರ್ಕಾರ ಸೂಕ್ತವಾದ ಹೆಜ್ಜೆ ಇಡಲಿದೆ ಎಂದು ತಿಳಿಸಿದರು.

ಪಾವಗಡ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡುವ ಕುರಿತಂತೆ ಸೂಕ್ತವಾದ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಗರಂ ಆಗಿ ಹೊರಟು ಹೋದ ಸಿಎಂ
ಭಗವದ್ಗೀತೆ ಅಳವಡಿಸಿದರೇ ಮಕ್ಕಳಲ್ಲಿ ನೈತಿಕೆ ಬರುತ್ತದೆಯೇ, ಈಗ ನೈತಿಕ ಶಿಕ್ಷಣ ಸಿಗುತ್ತಿಲ್ಲವೇ ಎಂದು ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗರಂ ಆದ ಪ್ರಸಂಗ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT