ಯಾದಗಿರಿ: ಭಾರತ್ ಬಂದ್ ಅಂಗವಾಗಿ ಮಂಗಳವಾರ ನಗರದ ಹೊಸ ಬಸ್ ನಿಲ್ದಾಣ ಬಳಿ ರೈತ, ಕಾರ್ಮಿಕ, ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಕಾರ್ಮಿಕ, ರೈತ ಪರ ಸಂಘಟನೆಗಳ ಪದಾಧಿಕಾರಿಗಳು ಧಿಕ್ಕಾರ ಕೂಗಿದರು.
ನಗರದ ಪ್ರಮುಖ ವೃತ್ತಗಳ ಸಮೀಪ ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಹೂ, ಹಣ್ಣು, ತಳ್ಳುಗಾಡಿಗಳಲ್ಲಿ ವ್ಯಾಪಾರ ನಡೆಯುತ್ತಿದೆ. ಅಂಗಡಿ ಮುಗ್ಗಟ್ಟುಗಳು ತೆಗೆದಿವೆ. ಆಟೊ, ಬಸ್ ಸಂಚಾರ ವ್ಯತ್ಯಯವಾಗಿಲ್ಲ.