<p><strong>ಯಾದಗಿರಿ:</strong> ಸೊನ್ನ ಬ್ಯಾರೇಜ್ನಿಂದ ಗುರುವಾರ ಭೀಮಾ ನದಿಗೆ 2.85 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಿದ್ದು, ಜಿಲ್ಲೆಯ ವಡಗೇರಾ, ಸೈದಾಪುರ ವ್ಯಾಪ್ತಿಯ ನೂರಾರು ಎಕರೆ ಭತ್ತ ಮುಳುಗಡೆಯಾಗಿದೆ. ಬ್ಯಾರೇಜ್ಗೆ 2,85,000 ಒಳಹರಿವಿದ್ದರೆ ಅಷ್ಟೆ ಪ್ರಮಾಣದಲ್ಲಿ ಭೀಮಾ ನದಿಗೆ ಹರಿಸಲಾಗುತ್ತಿದೆ.</p>.<p>ಏಕಾಏಕಿ ಭೀಮಾನದಿಗೆ ಅಪಾರ ಪ್ರಮಾಣ ನೀರು ಹರಿಸಿದ್ದರಿಂದ ತಾಲ್ಲೂಕಿನ ಸೈದಾಪುರ ಸಮೀಪದ ಗೂಡೂರು ಮತ್ತು ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಸುತ್ತಮುತ್ತಲಿನ ಜಮೀನು ಜಲಾವೃತ್ತವಾಗಿದೆ. ಜೋಳದಡಗಿ ಗೇಟ್ಗಳು ತೆಗೆಯದಿದ್ದರಿಂದ ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ.</p>.<p>ನದಿ ಪಾತ್ರದ ಗ್ರಾಮಗಳಾದ ಗೂಡೂರು, ಜೋಳದಡಗಿ, ಆನೂರು (ಕೆ), ಗೊಂದಡಗಿ, ಭೀಮನಹಳ್ಳಿ, ಆನೂರು (ಬಿ) ಸೇರಿದಂತೆ ಇತರ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಭತ್ತ ನಾಶವಾಗಿದೆ.</p>.<p><strong>ಸೈದಾಪುರ-ವಡಗೇರಾ-ರಾಯಚೂರು ಸಂಪರ್ಕ ಕಡಿತ:</strong>ಭೀಮಾ ನದಿ ತುಂಬಿ ಹರಿಯುತ್ತಿರುವುದರಿಂದ ನೆರೆಯ ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗ ಸಂಪೂರ್ಣ ಕಡಿತಗೊಂಡಿದೆ. ಅಲ್ಲದೆ ಸೈದಾಪುರದಿಂದ ವಡಗೇರಾ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಜಲಾವೃತ್ತವಾಗಿದೆ.</p>.<p><strong>ನಾರಾಯಣಪುರ ಡ್ಯಾಂನಿಂದಲೂ ನೀರು ಬಿಡುಗಡೆ:</strong>ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಜಲಾಶಯಕ್ಕೆ 1.50 ಲಕ್ಷ ಕ್ಯುಸೆಕ್ ನೀರು ಒಳಹರಿವಿದ್ದರೆ, 1,61,200 ಕ್ಯುಸೆಕ್ ನೀರು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಏಕಕಾಲಕ್ಕೆ ಕೃಷ್ಣಾ, ಭೀಮಾ ನದಿಗಳ ಪ್ರವಾಹ ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಸೊನ್ನ ಬ್ಯಾರೇಜ್ನಿಂದ ಗುರುವಾರ ಭೀಮಾ ನದಿಗೆ 2.85 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಿದ್ದು, ಜಿಲ್ಲೆಯ ವಡಗೇರಾ, ಸೈದಾಪುರ ವ್ಯಾಪ್ತಿಯ ನೂರಾರು ಎಕರೆ ಭತ್ತ ಮುಳುಗಡೆಯಾಗಿದೆ. ಬ್ಯಾರೇಜ್ಗೆ 2,85,000 ಒಳಹರಿವಿದ್ದರೆ ಅಷ್ಟೆ ಪ್ರಮಾಣದಲ್ಲಿ ಭೀಮಾ ನದಿಗೆ ಹರಿಸಲಾಗುತ್ತಿದೆ.</p>.<p>ಏಕಾಏಕಿ ಭೀಮಾನದಿಗೆ ಅಪಾರ ಪ್ರಮಾಣ ನೀರು ಹರಿಸಿದ್ದರಿಂದ ತಾಲ್ಲೂಕಿನ ಸೈದಾಪುರ ಸಮೀಪದ ಗೂಡೂರು ಮತ್ತು ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಸುತ್ತಮುತ್ತಲಿನ ಜಮೀನು ಜಲಾವೃತ್ತವಾಗಿದೆ. ಜೋಳದಡಗಿ ಗೇಟ್ಗಳು ತೆಗೆಯದಿದ್ದರಿಂದ ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ.</p>.<p>ನದಿ ಪಾತ್ರದ ಗ್ರಾಮಗಳಾದ ಗೂಡೂರು, ಜೋಳದಡಗಿ, ಆನೂರು (ಕೆ), ಗೊಂದಡಗಿ, ಭೀಮನಹಳ್ಳಿ, ಆನೂರು (ಬಿ) ಸೇರಿದಂತೆ ಇತರ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಭತ್ತ ನಾಶವಾಗಿದೆ.</p>.<p><strong>ಸೈದಾಪುರ-ವಡಗೇರಾ-ರಾಯಚೂರು ಸಂಪರ್ಕ ಕಡಿತ:</strong>ಭೀಮಾ ನದಿ ತುಂಬಿ ಹರಿಯುತ್ತಿರುವುದರಿಂದ ನೆರೆಯ ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗ ಸಂಪೂರ್ಣ ಕಡಿತಗೊಂಡಿದೆ. ಅಲ್ಲದೆ ಸೈದಾಪುರದಿಂದ ವಡಗೇರಾ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಜಲಾವೃತ್ತವಾಗಿದೆ.</p>.<p><strong>ನಾರಾಯಣಪುರ ಡ್ಯಾಂನಿಂದಲೂ ನೀರು ಬಿಡುಗಡೆ:</strong>ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಜಲಾಶಯಕ್ಕೆ 1.50 ಲಕ್ಷ ಕ್ಯುಸೆಕ್ ನೀರು ಒಳಹರಿವಿದ್ದರೆ, 1,61,200 ಕ್ಯುಸೆಕ್ ನೀರು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಏಕಕಾಲಕ್ಕೆ ಕೃಷ್ಣಾ, ಭೀಮಾ ನದಿಗಳ ಪ್ರವಾಹ ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>