ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೀಮರಾಯನಗುಡಿ ಕೃಷ್ಣಾ ಕಾಡಾ ಅಧ್ಯಕ್ಷರಿಂದ ಪದಗ್ರಹಣ

Last Updated 27 ನವೆಂಬರ್ 2020, 3:53 IST
ಅಕ್ಷರ ಗಾತ್ರ

ಶಹಾಪುರ: ರೈತರ ಹೊಲಗದ್ದೆಗಳಿಗೆ ಸಮರ್ಪಕವಾಗಿ ನೀರು ತಲುಪಿಸುವ ಮತ್ತು ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧನಾಗಿ. ರಾಜ್ಯ ಸರ್ಕಾರ ನೀಡುವ ಜವಾಬ್ದಾರಿಯನ್ನು ನಿರ್ವಹಿಸುವೆ. ಕಾಲುವೆ ಕೊನೆಯ ಭಾಗದ ಪ್ರತಿ ರೈತರ ಹೊಲಗಳಿಗೆ ನೀರು ಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಭೀಮರಾಯನಗುಡಿ ಕೃಷ್ಣಾ ಕಾಡಾ ನೂತನ ಅಧ್ಯಕ್ಷ ಶರಣಪ್ಪ ತಳವಾರ ತಿಳಿಸಿದರು.

ಭೀಮರಾಯನಗುಡಿ ಕೃಷ್ಣಾ ಕಾಡಾ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಧಿಕಾರ ಸ್ವೀಕಾರ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾನು ರೈತನ ಮಗನಾಗಿದ್ದು, ರೈತರ ನೋವು ಮತ್ತು ಸಂಕಷ್ಟದ ಅರಿವು ಇದೆ. ಸರ್ಕಾರದ ರೈತ ಪರ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಕ್ಕೆ ತರಲು ಯತ್ನಿಸುವೆ. ಪರಸ್ಪರ ಸಹಕಾರದಿಂದ ಕಾಡಾ ಆಡಳಿತ ಮುನ್ನಡೆಸಿಕೊಂಡು ಹೋಗುವುದಾಗಿ ಭರವಸೆ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರಡ್ಡಿ, ಪಣಿರಾಜು, ವೆಂಕಟರಡ್ಡಿ ಅಬ್ಬೆತುಮಕೂರ, ಗುರು ಕಾಮಾ, ದೇವಿಂದ್ರಪ್ಪ ಖಾನಾಪುರ, ದೇವರಾಜ ನಾಯಕ, ಯಲ್ಲಯ್ಯ ನಾಯಕ ವನದುರ್ಗ, ಮಲ್ಲಿಕಾರ್ಜುನ ಚಿಲ್ಲಾಳ, ಶೇಖರ ದೊರಿ, ರಾಜುಗೌಡ ಉಕ್ಕಿನಾಳ, ರಾಘವೇಂದ್ರ ಯಕ್ಷಿಂತಿ, ದೇವಿಂದ್ರ ಕೊನೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT