<p><strong>ಹುಣಸಗಿ</strong>: ‘ಪ್ರತಿಭೆ ಹಾಗೂ ಕಲೆ ಯಾರ ಸ್ವತ್ತೂ ಅಲ್ಲ. ಅದು ಸಾಧನೆಗೆ ಮಾತ್ರ ಸಾಧ್ಯ. ಮಲ್ಲಮ್ಮ ಅದನ್ನು ಮತ್ತೊಮ್ಮೆ ನಿರೂಪಿಸಿದ್ದಾರೆ’ ಎಂದು ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ ಹೇಳಿದರು.</p>.<p>ಹುಣಸಗಿ ತಾಲ್ಲೂಕಿನ ಕನ್ನೇಳ್ಳಿ ಗ್ರಾಮಕ್ಕೆ ಬಿಗ್ಬಾಸ್ನಲ್ಲಿ ಪಾಲ್ಗೊಂಡು ಆಗಮಿಸಿದ್ದ ಮಲ್ಲಮ್ಮ ಅವರಿಗೆ ತವರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಹಾಗೂ ಗ್ರಾಮೀಣ ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಮಲ್ಲಮ್ಮ ಬಾವಿ ಅವರು ಗ್ರಾಮೀಣ ಭಾಗದ ಒಬ್ಬ ಅನಕ್ಷರಸ್ಥ ಮಹಿಳೆಯಾಗಿದ್ದರೂ ಅವರಲ್ಲಿರುವ ಪ್ರತಿಭೆಯಿಂದ ಉತ್ತಮವಾಗಿ ಪ್ರದರ್ಶನ ನೀಡಿ ರಾಜ್ಯದ ಜನತೆಯ ಗಮನ ಸೆಳೆದಿದ್ದಾರೆ’ ಎಂದರು.</p>.<p>ಸನ್ಮಾನ ಸ್ವೀಕರಿಸಿದ ಮಲ್ಲಮ್ಮ ಬಾವಿ ಮಾತನಾಡಿ, ‘ನಿರ್ದಿಷ್ಟ ಗುರಿ, ಉದ್ದೇಶ, ಪ್ರಾಮಾಣಿಕತೆ, ನಿಯತ್ತು ಇದ್ದರೆ ನಾವು ಯಾವುದೇ ಕ್ಷೇತ್ರದಲ್ಲಿಯೂ ಸಾಧನೆ ಮಾಡಬಹುದು. ನಮ್ಮೂರಿನವರು ನನಗೆ ಸನ್ಮಾನಿಸುತ್ತಿರುವುದು ನನ್ನ ಬದುಕಿನಲ್ಲಿ ಎಂದೂ ಮರೆಯಲಾಗದ ಕ್ಷಣ’ ಎಂದು ಭಾವುಕರಾಗಿ ನುಡಿದರು.</p>.<p>ಆರಂಭದಲ್ಲಿ ನಟ ಮನೋಜ್ ಕುಮಾರ್, ಪಲ್ಲವಿ ಲಕ್ಷ್ಮೀಕಾಂತಗೌಡ ಜೊತೆಗೆ ಮಲ್ಲಮ್ಮ ಅವರನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾ ತಂಡ ಹಾಗೂ ವಾದ್ಯ ಮೇಳದೊಂದಿಗೆ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಕಲಾವಿದರಾದ ವೀರೇಶ ಗವಾಯಿ ಹಾಗೂ ಮಹಾಂತೇಶ ಹೆಗ್ಗಣದೊಡ್ಡಿ, ಬಾಗೇಶ ಸಿಂದಗಿ, ದಾಸಪ್ಪ ದೊರನಳ್ಳಿ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು.</p>.<p>ಈ ಸಂದರ್ಭದಲ್ಲಿ ದೇವದುರ್ಗದ ಮಲದಕಲ್ ಬಸವರಾಜ ಸ್ವಾಮೀಜಿ, ನಗನೂರದ ಸೂಗುರೇಶ್ವರ ಸ್ವಾಮೀಜಿ, ಬಂಡೆಪ್ಪನಳ್ಳಿ ಶರಣರು ಸೇರಿದಂತೆ ಇತರರು ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಕನ್ನೆಳ್ಳಿ ಗ್ರಾಮದ ಮಲ್ಲಯ್ಯ ಸ್ವಾಮಿ ಹಿರೇಮಠ, ಪಂಚಯ್ಯ ಮಠಪತಿ, ಗೋವಿಂದರಾಜ ದೇವರು, ದೊಡ್ಡಪ್ಪಗೌಡ ಪೊಲೀಸ್ ಪಾಟೀಲ್, ಬಾಪುಗೌಡ ಮಾಲಿಪಾಟೀಲ್, ಹನುಮಂತರಾಯ ಮಾಸ್ಟರ್ ಹೆಬ್ಬಾಳ್ಕರ್, ಪಿಎಸ್ಐ ಸಿದ್ದಣ್ಣ ಯಡ್ರಾಮಿ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.</p>.<p>ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ನಿರೂಪಿಸಿದರು. ಮಲ್ಲು ಚಾನಕೋಟಿ ಸ್ವಾಗತಿಸಿದರು. ಮಂಜುನಾಥ ಟೇಲರ ವಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ</strong>: ‘ಪ್ರತಿಭೆ ಹಾಗೂ ಕಲೆ ಯಾರ ಸ್ವತ್ತೂ ಅಲ್ಲ. ಅದು ಸಾಧನೆಗೆ ಮಾತ್ರ ಸಾಧ್ಯ. ಮಲ್ಲಮ್ಮ ಅದನ್ನು ಮತ್ತೊಮ್ಮೆ ನಿರೂಪಿಸಿದ್ದಾರೆ’ ಎಂದು ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ ಹೇಳಿದರು.</p>.<p>ಹುಣಸಗಿ ತಾಲ್ಲೂಕಿನ ಕನ್ನೇಳ್ಳಿ ಗ್ರಾಮಕ್ಕೆ ಬಿಗ್ಬಾಸ್ನಲ್ಲಿ ಪಾಲ್ಗೊಂಡು ಆಗಮಿಸಿದ್ದ ಮಲ್ಲಮ್ಮ ಅವರಿಗೆ ತವರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಹಾಗೂ ಗ್ರಾಮೀಣ ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಮಲ್ಲಮ್ಮ ಬಾವಿ ಅವರು ಗ್ರಾಮೀಣ ಭಾಗದ ಒಬ್ಬ ಅನಕ್ಷರಸ್ಥ ಮಹಿಳೆಯಾಗಿದ್ದರೂ ಅವರಲ್ಲಿರುವ ಪ್ರತಿಭೆಯಿಂದ ಉತ್ತಮವಾಗಿ ಪ್ರದರ್ಶನ ನೀಡಿ ರಾಜ್ಯದ ಜನತೆಯ ಗಮನ ಸೆಳೆದಿದ್ದಾರೆ’ ಎಂದರು.</p>.<p>ಸನ್ಮಾನ ಸ್ವೀಕರಿಸಿದ ಮಲ್ಲಮ್ಮ ಬಾವಿ ಮಾತನಾಡಿ, ‘ನಿರ್ದಿಷ್ಟ ಗುರಿ, ಉದ್ದೇಶ, ಪ್ರಾಮಾಣಿಕತೆ, ನಿಯತ್ತು ಇದ್ದರೆ ನಾವು ಯಾವುದೇ ಕ್ಷೇತ್ರದಲ್ಲಿಯೂ ಸಾಧನೆ ಮಾಡಬಹುದು. ನಮ್ಮೂರಿನವರು ನನಗೆ ಸನ್ಮಾನಿಸುತ್ತಿರುವುದು ನನ್ನ ಬದುಕಿನಲ್ಲಿ ಎಂದೂ ಮರೆಯಲಾಗದ ಕ್ಷಣ’ ಎಂದು ಭಾವುಕರಾಗಿ ನುಡಿದರು.</p>.<p>ಆರಂಭದಲ್ಲಿ ನಟ ಮನೋಜ್ ಕುಮಾರ್, ಪಲ್ಲವಿ ಲಕ್ಷ್ಮೀಕಾಂತಗೌಡ ಜೊತೆಗೆ ಮಲ್ಲಮ್ಮ ಅವರನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾ ತಂಡ ಹಾಗೂ ವಾದ್ಯ ಮೇಳದೊಂದಿಗೆ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಕಲಾವಿದರಾದ ವೀರೇಶ ಗವಾಯಿ ಹಾಗೂ ಮಹಾಂತೇಶ ಹೆಗ್ಗಣದೊಡ್ಡಿ, ಬಾಗೇಶ ಸಿಂದಗಿ, ದಾಸಪ್ಪ ದೊರನಳ್ಳಿ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು.</p>.<p>ಈ ಸಂದರ್ಭದಲ್ಲಿ ದೇವದುರ್ಗದ ಮಲದಕಲ್ ಬಸವರಾಜ ಸ್ವಾಮೀಜಿ, ನಗನೂರದ ಸೂಗುರೇಶ್ವರ ಸ್ವಾಮೀಜಿ, ಬಂಡೆಪ್ಪನಳ್ಳಿ ಶರಣರು ಸೇರಿದಂತೆ ಇತರರು ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಕನ್ನೆಳ್ಳಿ ಗ್ರಾಮದ ಮಲ್ಲಯ್ಯ ಸ್ವಾಮಿ ಹಿರೇಮಠ, ಪಂಚಯ್ಯ ಮಠಪತಿ, ಗೋವಿಂದರಾಜ ದೇವರು, ದೊಡ್ಡಪ್ಪಗೌಡ ಪೊಲೀಸ್ ಪಾಟೀಲ್, ಬಾಪುಗೌಡ ಮಾಲಿಪಾಟೀಲ್, ಹನುಮಂತರಾಯ ಮಾಸ್ಟರ್ ಹೆಬ್ಬಾಳ್ಕರ್, ಪಿಎಸ್ಐ ಸಿದ್ದಣ್ಣ ಯಡ್ರಾಮಿ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.</p>.<p>ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ನಿರೂಪಿಸಿದರು. ಮಲ್ಲು ಚಾನಕೋಟಿ ಸ್ವಾಗತಿಸಿದರು. ಮಂಜುನಾಥ ಟೇಲರ ವಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>