ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಬೈಕ್ ಸವಾರರು ಸಾವು

Last Updated 1 ಜೂನ್ 2021, 3:30 IST
ಅಕ್ಷರ ಗಾತ್ರ

ಕೆಂಭಾವಿ:ಪಟ್ಟಣದ ಹೊರವಲಯದ ಕೆಂಭಾವಿ-ತಾಳಿಕೋಟಿ ರಾಜ್ಯ ಹೆದ್ದಾರಿಯ ಮೇಲೆ ಅಪರಿಚಿತ ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರೂ ಯುವಕರು ಮೃತಪಟ್ಟಿದ್ದಾರೆ.

ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆಬೈಕ್ ಸವಾರರಮೇಲೆ ಅಪರಿಚಿತ ವಾಹನ ಹರಿದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಬೈಕ್ ಸವಾರರ ಪೈಕಿ ಏವೂರ ದೊಡ್ಡ ತಾಂಡಾ ನಿವಾಸಿ ಶಿವು ಜಾಧವ (25)ಮೃತಪಟ್ಟಿದ್ದು, ಇನ್ನೊಬ್ಬರ ಹೆಸರು ತಿಳಿದುಬಂದಿಲ್ಲ. ಸ್ಥಳಕ್ಕೆ ಪ್ರೊಬೇಷನರಿ ಪಿಎಸ್‍ಐ ರಾಹುಲ್ ಪವಾಡೆ ಭೇಟಿ ನೀಡಿ ಪರಿಶೀಲನೆ ಮಾಡಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT