ಘಟನೆ ವಿವರ: ಮಂಗಳವಾರ ಗ್ರಾಮದಿಂದ ಯಾದಗಿರಿಗೆ ಮಹಾದೇವಪ್ಪ ಅವರ ಅತ್ತಿಗೆಯನ್ನು ಅಸ್ಪತ್ರೆಗೆ ಕರೆದಿದ್ದಾರೆ. ಮರಳಿಗೆ ಗ್ರಾಮಕ್ಕೆ ತೆರಳುವ ವೇಳೆ ಹೈವೇ ಡಾಬಾದ ಬಳಿ ಕಾರು ಚಾಲಕ ನಿರ್ಲಕ್ಷ್ಯದಿಂದ ವೇಗವಾಗಿ ಕಾರು ಚಲಾಯಿಸಿ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಹಾರಿ ಬಿದ್ದಿದ್ದಾರೆ. ಯುವಕ ಸ್ಥಳದಲ್ಲೇ ಮೃತಪಟ್ಟರೆ ಅವರ ಅತ್ತಿಗೆಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕಾರು ಚಾಲಕ ಕಾರು ನಿಲ್ಲಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.