<p><strong>ಯಾದಗಿರಿ</strong>: ನಗರದ ಮಾತಾ ಮಾಣಿಕೇಶ್ವರಿ ನಗರದಲ್ಲಿ ಮಂಗಳವಾರ ವಿದ್ಯುತ್ ಪ್ರವಹಿಸುತ್ತಿದ್ದ ಹೈಟೆನ್ಷನ್ ತಂತಿ ಮೈಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ವಡಗೇರಾ ತಾಲ್ಲೂಕಿನ ಬಬಲಾದ ಗ್ರಾಮದ ನಿವಾಸಿ ಖಾಜಾ ಪಟೇಲ್ (20) ಮೃತರು.</p>.<p>‘ನಗರದ ಮಾತಾ ಮಾಣಿಕೇಶ್ವರಿ ನಗರದಲ್ಲಿದ್ದ ಸಹೋದರಿ ಮನೆಗೆ ಖಾಜಾ ಪಟೇಲ್ ಹೋಗುವಾಗ ಏಕಾಏಕಿ ಹೈಟೆನ್ಷನ್ ತಂತಿ ತುಂಡಾಗಿ ಮೈಮೇಲೆ ಬಿದ್ದಿದೆ. ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಜೆಸ್ಕಾಂ ನಿರ್ಲಕ್ಷ್ಯದಿಂದಲೇ ಯುವಕ ಮೃತಪಟ್ಟಿದ್ದಾನೆ’ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<p>‘ಹೈಟೆನ್ಷನ್ ತಂತಿಯಲ್ಲಿ 11 ಕೆವಿ ವಿದ್ಯುತ್ ಪ್ರವಹಿಸುತ್ತಿತ್ತು. ತಂತಿ ಬಿದ್ದು ಯುವಕ ಮೃತಪಟ್ಟಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ರಾಘವೇಂದ್ರ ತಿಳಿಸಿದ್ದಾರೆ.</p>.<p>‘ಯುವಕ ಹೆಲ್ಮೆಟ್ ಧರಿಸಿದ್ದ. ತುಂಡರಿಸಿ ಬಿದ್ದ ತಂತಿ ಕಾಣದ ಕಾರಣ ಅವಘಡ ಸಂಭವಿಸಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ನಗರದ ಮಾತಾ ಮಾಣಿಕೇಶ್ವರಿ ನಗರದಲ್ಲಿ ಮಂಗಳವಾರ ವಿದ್ಯುತ್ ಪ್ರವಹಿಸುತ್ತಿದ್ದ ಹೈಟೆನ್ಷನ್ ತಂತಿ ಮೈಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ವಡಗೇರಾ ತಾಲ್ಲೂಕಿನ ಬಬಲಾದ ಗ್ರಾಮದ ನಿವಾಸಿ ಖಾಜಾ ಪಟೇಲ್ (20) ಮೃತರು.</p>.<p>‘ನಗರದ ಮಾತಾ ಮಾಣಿಕೇಶ್ವರಿ ನಗರದಲ್ಲಿದ್ದ ಸಹೋದರಿ ಮನೆಗೆ ಖಾಜಾ ಪಟೇಲ್ ಹೋಗುವಾಗ ಏಕಾಏಕಿ ಹೈಟೆನ್ಷನ್ ತಂತಿ ತುಂಡಾಗಿ ಮೈಮೇಲೆ ಬಿದ್ದಿದೆ. ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಜೆಸ್ಕಾಂ ನಿರ್ಲಕ್ಷ್ಯದಿಂದಲೇ ಯುವಕ ಮೃತಪಟ್ಟಿದ್ದಾನೆ’ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<p>‘ಹೈಟೆನ್ಷನ್ ತಂತಿಯಲ್ಲಿ 11 ಕೆವಿ ವಿದ್ಯುತ್ ಪ್ರವಹಿಸುತ್ತಿತ್ತು. ತಂತಿ ಬಿದ್ದು ಯುವಕ ಮೃತಪಟ್ಟಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ರಾಘವೇಂದ್ರ ತಿಳಿಸಿದ್ದಾರೆ.</p>.<p>‘ಯುವಕ ಹೆಲ್ಮೆಟ್ ಧರಿಸಿದ್ದ. ತುಂಡರಿಸಿ ಬಿದ್ದ ತಂತಿ ಕಾಣದ ಕಾರಣ ಅವಘಡ ಸಂಭವಿಸಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>