ಮಾಜಿ ಶಾಸಕ ಗುರು ಪಾಟೀಲ ಶಿರವಾಳ ಅವರು ಪ್ರಬಲ ಲಿಂಗಾಯತ ಸಮುದಾಯದ ನಾಯಕ. ಅವರ ತಟಸ್ಥ ನಿಲುವು, ಅಭ್ಯರ್ಥಿಗಳಿಗೆ ಒಳ ಏಟು ನೀಡುವ ಲೆಕ್ಕಾಚಾರವನ್ನು ಅಲ್ಲಗಳೆಯುವಂತಿಲ್ಲ. ಬಿಜೆಪಿ ಮುಖಂಡರು, ನಮ್ಮ ಜತೆ ಪ್ರಚಾರಕ್ಕೆ ಬರುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರೆ, ಕಾಂಗ್ರೆಸ್ಸಿನ ನಾಯಕರು ನಮ್ಮ ಪಕ್ಷಕ್ಕೆ ಸೇರ್ಪಡೆಯಾದರೆ ಸ್ವಾಗತವಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ಪ್ರತಿಕ್ರಿಯೆ ನೀಡುತ್ತಿಲ್ಲ.