‘ಬಿಜೆಪಿ ಪಕ್ಷ ನಮ್ಮ ಸದಸ್ಯರನ್ನು ಸೆಳೆಯುವ ಮೂಲಕ ಕೆಟ್ಟ ಚಾಳಿ ಮುಂದುವರಿಸಿದೆ. ಅವರಲ್ಲಿ ಯಾವ ನೈತಿಕತೆ ಉಳಿದಿದೆ. ಕಾಂಗ್ರೆಸ್ನ ಎಲ್ಲ ಸದಸ್ಯರಿಗೆ ವಿಪ್ ಜಾರಿ ಮಾಡಿದ್ದೆವು. ಯಡಿಯಾಪುರ ಅವರ ಮನೆಗೆ ತೆರಳಿ ನಮ್ಮ ಅಭ್ಯರ್ಥಿ ಪರವಾಗಿ ಮತ ಹಾಕಲು ವಿನಂತಿಸಿದ್ದೆವು, ದುರಾಸೆಯಿಂದ ಅವರು ಪಕ್ಷ ಬಿಟ್ಟು ಹೋದರು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಹುಲಕಲ್ ಹೇಳುತ್ತಾರೆ.