ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,‘ಆಪರೇಷನ್ ಕಮಲದಲ್ಲಿ ಸಭಾಪತಿಗೆ ₹25 ಕೋಟಿ ನೀಡಲಾಗಿದೆ ಎಂಬುದಾಗಿ ಬಿ.ಎಸ್.ಯಡಿಯೂರಪ್ಪ ಸಿಡಿಯಲ್ಲಿ ಮಾತನಾಡಿದ್ದಾರೆ ಎಂಬುದಾಗಿ ಪತ್ರಿಕಾಗೋಷ್ಠಿಯಲ್ಲೇ ಹೇಳಿದ್ದರು. ಆದರೆ, ಮರುದಿನ,‘ ನಾನು ಯಡಿಯೂರಪ್ಪ ಅವರ ಹೆಸರು ಉಚ್ಚರಿಸಿಲ್ಲ’ ಎಂದು ಮಾತು ಬದಲಾಯಿಸುತ್ತಿದ್ದಾರೆ. ಇಷ್ಟರಲ್ಲೇ ಸಿಎಂ ಎಚ್.ಡಿ.ಕುಮಾರಸ್ವಾಮಿ ಎಂಥಾ ಮಾತಿನ ಮಲ್ಲರು ಎಂಬುದು ಗೊತ್ತಾಗುತ್ತದೆ’ ಎಂದರು.