ಈ ಕುರಿತು ಬುಧವಾರ ಪತ್ರಿಕೆಯೊಂದಿಗೆ ಮಾತನಾಡಿ, ‘ಕಳೆದ ವಿಧಾನಸಭಾ ಚುನಾವಣೆಗಿಂತ ಈ ಬಾರಿ 8ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡುವ ಮೂಲಕ ನನಗೆ ಮತದಾರರು ಆಶೀರ್ವದಿಸಿದ್ದಾರೆ. ಅಲ್ಲದೇ ಸುರಪುರ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದರಿಂದಾಗಿ ಇಷ್ಟು ಹೆಚ್ಚು ಮತಗಳು ಬರಲು ಸಾಧ್ಯವಾಯಿತು. ಆದರೆ ಗ್ಯಾರಂಟಿ ಯೋಜನೆ ಹಾಗೂ ಹಿಂದಿನ ಶಾಸಕರ ನಿಧನದ ಅನುಕಂಪದ ಅಲೆಗೆ ಮತದಾರರು ಆಶೀರ್ವದಿಸಿದ್ದಾರೆ’ ಎಂದರು.