ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು: ಶಾಸಕ ರಾಜಾ ವೆಂಕಟಪ್ಪನಾಯಕ

Last Updated 8 ಏಪ್ರಿಲ್ 2022, 5:14 IST
ಅಕ್ಷರ ಗಾತ್ರ

ಸುರಪುರ: ಯಡಹಳ್ಳಿ ಗ್ರಾಮದ ಕೆಲವು ಮುಖಂಡರು ಬಿಜೆಪಿ ತೊರೆದು ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಈ ವೇಳೆ ಮಾತನಾಡಿದ ರಾಜಾ ವೆಂಕಟಪ್ಪ ನಾಯಕ, ‘ಬಿಜೆಪಿ ಸರ್ಕಾರಗಳ ದುರಾಡಳಿತಕ್ಕೆ ಜನರು ರೋಸಿಹೊಗಿ ಕಾಂಗ್ರೆಸ್‌ನತ್ತ ಮುಖಮಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಪಕ್ಷದ ಸಿದ್ದಾಂತವನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾದ ಕಾರ್ಯಕರ್ತರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು’ ಎಂದು ಹೇಳಿದರು.

ನಿಂಗಣ್ಣಗೌಡ ಕಚಕನೂರ, ದೇವಪ್ಪ ಬಬಲಾದಿ, ಸಾಯಬಣ್ಣ ಬಬಲಾದಿ, ಭೂಮಣ್ಣ ಪೂಜಾರಿ ಹಿರೇಕುರುಬ, ಮಾಳಪ್ಪ ಹಿರೇಕುರುಬ, ಪರಸಪ್ಪ ತಮದೊಡ್ಡಿ, ಕೂಡ್ಲಿಗೆಪ್ಪ ಸೇರಿದಂತೆ ಹಲವರು ಕಾಂಗ್ರೆಸ್‌ಗೆ ಸೇರಿದರು.

ಮುಖಂಡರಾದ ವಿಠಲ್ ಯಾದವ, ನಿಂಗರಾಜ ಬಾಚಿಮಟ್ಟಿ, ಮಲ್ಲಣ್ಣ ಸಾಹು ಮುದೋಳ, ರಾಜಾ ಸಂತೋಷ ನಾಯಕ, ರಾಜಾ ಕುಮಾರ ನಾಯಕ, ಭೀಮರಾಯ ಮೂಲಿಮನಿ, ಶಿವರಾಯ ಕಾಡ್ಲೂರು, ಗೋಪಾಲ ದೊರಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT