<p><strong>ಯಾದಗಿರಿ:</strong> ‘ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲರ ನಡೆ ಮತ್ತು ನುಡಿಗಳು ಒಂದಾಗಿದ್ದವು. ಅದಕ್ಕೆ ಅವರು ರಚಿಸಿದ ಸಂಜೆಗೊಂದು ನುಡಿ ಚಿಂತನ ಮತ್ತು ಸಾಧ್ವಿ ಶಿರೋಮಣಿ ಶಿವಶರಣೆ ಹೇಮಾರೆಡ್ಡಿ ಮಲ್ಲಮ್ಮ ಜೀವನ ಕೃತಿಗಳು ಸಾಕ್ಷಿಯಾಗಿವೆ’ ಎಂದು ಹೈಕೋರ್ಟ್ ನ್ಯಾಯಾದೀಶ ವಿ.ಶ್ರೀಶಾನಂದ ಹೇಳಿದರು.</p>.<p>ನಗರದ ಸರ್ಕಾರಿ ಕಾಲೇಜಿನಲ್ಲಿ ನ್ಯಾಯಮೂರ್ತಿ ಶಿವರಾಜ ಪಾಟೀಲ ಪ್ರತಿಷ್ಠಾನ ವತಿಯಿಂದ ಭಾನುವಾರ ಆಯೋಜಿಸಿದ್ದ ‘ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಅವರು ರಚಿಸಿದ ಸಂಜೆಗೊಂದು ನುಡಿ ಚಿಂತನ 365 ಮತ್ತು ಸಾದ್ವಿ ಶಿರೋಮಣಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಪುಸ್ತಕಗಳ ಬಿಡುಗಡೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮತ, ಧರ್ಮ ಅಥವಾ ದೇವರನ್ನು ನಂಬಿದರೂ ಪರವಾಗಿಲ್ಲ. ಆದರೆ ನಂಬಿಕ ಪೂರ್ಣಪ್ರಮಾಣದಲ್ಲಿರಲಿ. ಅಂದರೆ ಮಾತ್ರ ಜೀವನದ ದಡಕ್ಕೆ ತಲುಪಬಹುದು. ನ್ಯಾಯಮೂರ್ತಿ ಶಿವರಾಜ ಪಾಟೀಲರ ಕೃತಿಗಳನ್ನು ಓದಿ, ಉತ್ತಮ ಚಿಂತನೆಗಳನ್ನೂ ಅಳವಡಿಸಿಕೊಂಡಾಗ ಮಾತ್ರ ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ಅಬ್ಬೆತುಮಕೂರಿನ ವಿಶ್ವಾರಾಧ್ಯ ಮಠದ ಗಂಗಾಧರ ಸ್ವಾಮೀಜಿ ಮಾತನಾಡಿ, ‘ನ್ಯಾ.ಶಿವರಾಜ ಪಾಟೀಲರು ಬದುಕಿನ ಎಲ್ಲ ಮೌಲ್ಯಗಳನ್ನು ಅರಿತುಕೊಂಡವರು. ಅವರು ನಡೆದಾಡುವ ಜ್ಞಾನಕೋಶದಂತೆ. ಅವರು ರಚಿಸಿದ ಕೃತಿಗಳು ಅಮೂಲ್ಯ ಚಿಂತನೆಗಳನ್ನು ಒಳಗೊಂಡಿವೆ’ ಎಂದರು.</p>.<p>ಸಾಧ್ವಿ ಶಿರೋಮಣಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಕೃತಿಯ ಕುರಿತು ಉಪನ್ಯಾಸಕಿ ಶೈಲಜಾ ಬಾಗೇವಾಡಿ ಮಾತನಾಡಿದರು.</p>.<p>ಪ್ರತಿಷ್ಠಾನದ ಕಾರ್ಯದರ್ಶಿ ಪ್ರೊ. ಚನ್ನಾರಡ್ಡಿ ಪಾಟೀಲ ಹಾಗೂ ಪ್ರತಿಷ್ಠಾನದ ಸಂಯೋಜಕ ಕಲ್ಯಾಣರಾವ ಪಾಟೀಲ ಮಾತನಾಡಿದರು. ವಿಶ್ರಾಂತ ನ್ಯಾಯಾದೀಶ ಎಸ್.ಎಂ. ರಡ್ಡಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಸುಭಾಷಚಂದ್ರ ಕೌಲಗಿ, ವಿಶ್ರಾಂತ ನ್ಯಾಯಾದೀಶ ಎನ್. ಶರಣಪ್ಪ, ಹಿರಿಯ ವಕೀಲ ಎಸ್.ಬಿ.ಪಾಟೀಲ ಉಪಸ್ಥಿತರಿದ್ದರು. ಸಿದ್ದರಾಜರಡ್ಡಿ ನಿರ್ವಹಿಸಿದರು.</p>.<div><blockquote>ಜೀವನದಲ್ಲಿ ಕಷ್ಟದಲ್ಲಿರುವವರು ನಿಜವಾದ ಸಹಾಯದ ಅಗತ್ಯ ಇರುವವರನ್ನು ಮೇಲೆತ್ತುವ ಕೆಲಸವಾಗಬೇಕು. ನಾವೂ ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಪುಸ್ತಕಗಳಲ್ಲಿನ ಆದರ್ಶಗಳು ಮಸ್ತಕದಲ್ಲಿ ಒಡಮೂಡುವಂತಾಗಲಿ</blockquote><span class="attribution"> ವಿ. ಶ್ರೀಶಾನಂದ ಹೈಕೋರ್ಟ್ ನ್ಯಾಯಾಧೀಶ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ‘ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲರ ನಡೆ ಮತ್ತು ನುಡಿಗಳು ಒಂದಾಗಿದ್ದವು. ಅದಕ್ಕೆ ಅವರು ರಚಿಸಿದ ಸಂಜೆಗೊಂದು ನುಡಿ ಚಿಂತನ ಮತ್ತು ಸಾಧ್ವಿ ಶಿರೋಮಣಿ ಶಿವಶರಣೆ ಹೇಮಾರೆಡ್ಡಿ ಮಲ್ಲಮ್ಮ ಜೀವನ ಕೃತಿಗಳು ಸಾಕ್ಷಿಯಾಗಿವೆ’ ಎಂದು ಹೈಕೋರ್ಟ್ ನ್ಯಾಯಾದೀಶ ವಿ.ಶ್ರೀಶಾನಂದ ಹೇಳಿದರು.</p>.<p>ನಗರದ ಸರ್ಕಾರಿ ಕಾಲೇಜಿನಲ್ಲಿ ನ್ಯಾಯಮೂರ್ತಿ ಶಿವರಾಜ ಪಾಟೀಲ ಪ್ರತಿಷ್ಠಾನ ವತಿಯಿಂದ ಭಾನುವಾರ ಆಯೋಜಿಸಿದ್ದ ‘ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಅವರು ರಚಿಸಿದ ಸಂಜೆಗೊಂದು ನುಡಿ ಚಿಂತನ 365 ಮತ್ತು ಸಾದ್ವಿ ಶಿರೋಮಣಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಪುಸ್ತಕಗಳ ಬಿಡುಗಡೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮತ, ಧರ್ಮ ಅಥವಾ ದೇವರನ್ನು ನಂಬಿದರೂ ಪರವಾಗಿಲ್ಲ. ಆದರೆ ನಂಬಿಕ ಪೂರ್ಣಪ್ರಮಾಣದಲ್ಲಿರಲಿ. ಅಂದರೆ ಮಾತ್ರ ಜೀವನದ ದಡಕ್ಕೆ ತಲುಪಬಹುದು. ನ್ಯಾಯಮೂರ್ತಿ ಶಿವರಾಜ ಪಾಟೀಲರ ಕೃತಿಗಳನ್ನು ಓದಿ, ಉತ್ತಮ ಚಿಂತನೆಗಳನ್ನೂ ಅಳವಡಿಸಿಕೊಂಡಾಗ ಮಾತ್ರ ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ಅಬ್ಬೆತುಮಕೂರಿನ ವಿಶ್ವಾರಾಧ್ಯ ಮಠದ ಗಂಗಾಧರ ಸ್ವಾಮೀಜಿ ಮಾತನಾಡಿ, ‘ನ್ಯಾ.ಶಿವರಾಜ ಪಾಟೀಲರು ಬದುಕಿನ ಎಲ್ಲ ಮೌಲ್ಯಗಳನ್ನು ಅರಿತುಕೊಂಡವರು. ಅವರು ನಡೆದಾಡುವ ಜ್ಞಾನಕೋಶದಂತೆ. ಅವರು ರಚಿಸಿದ ಕೃತಿಗಳು ಅಮೂಲ್ಯ ಚಿಂತನೆಗಳನ್ನು ಒಳಗೊಂಡಿವೆ’ ಎಂದರು.</p>.<p>ಸಾಧ್ವಿ ಶಿರೋಮಣಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಕೃತಿಯ ಕುರಿತು ಉಪನ್ಯಾಸಕಿ ಶೈಲಜಾ ಬಾಗೇವಾಡಿ ಮಾತನಾಡಿದರು.</p>.<p>ಪ್ರತಿಷ್ಠಾನದ ಕಾರ್ಯದರ್ಶಿ ಪ್ರೊ. ಚನ್ನಾರಡ್ಡಿ ಪಾಟೀಲ ಹಾಗೂ ಪ್ರತಿಷ್ಠಾನದ ಸಂಯೋಜಕ ಕಲ್ಯಾಣರಾವ ಪಾಟೀಲ ಮಾತನಾಡಿದರು. ವಿಶ್ರಾಂತ ನ್ಯಾಯಾದೀಶ ಎಸ್.ಎಂ. ರಡ್ಡಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಸುಭಾಷಚಂದ್ರ ಕೌಲಗಿ, ವಿಶ್ರಾಂತ ನ್ಯಾಯಾದೀಶ ಎನ್. ಶರಣಪ್ಪ, ಹಿರಿಯ ವಕೀಲ ಎಸ್.ಬಿ.ಪಾಟೀಲ ಉಪಸ್ಥಿತರಿದ್ದರು. ಸಿದ್ದರಾಜರಡ್ಡಿ ನಿರ್ವಹಿಸಿದರು.</p>.<div><blockquote>ಜೀವನದಲ್ಲಿ ಕಷ್ಟದಲ್ಲಿರುವವರು ನಿಜವಾದ ಸಹಾಯದ ಅಗತ್ಯ ಇರುವವರನ್ನು ಮೇಲೆತ್ತುವ ಕೆಲಸವಾಗಬೇಕು. ನಾವೂ ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಪುಸ್ತಕಗಳಲ್ಲಿನ ಆದರ್ಶಗಳು ಮಸ್ತಕದಲ್ಲಿ ಒಡಮೂಡುವಂತಾಗಲಿ</blockquote><span class="attribution"> ವಿ. ಶ್ರೀಶಾನಂದ ಹೈಕೋರ್ಟ್ ನ್ಯಾಯಾಧೀಶ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>