<p><strong>ಹುಣಸಗಿ:</strong> ಕಳೆದ ನಾಲ್ಕು ತಿಂಗಳ ಹಿಂದೆ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದ ಬಾಲಕನ ಮೃತದೇಹ ಹೊರ ತೆಗದು ಶವ ಪರೀಕ್ಷೆ ನಡೆಸಿದ ಘಟನೆ ತಾಲ್ಲೂಕಿನ ಜೋಗುಂಡಬಾವಿ ಗ್ರಾಮದಲ್ಲಿ ಬುಧವಾರ ನಡೆದಿದೆ.</p>.<p>ಜೋಗುಂಡಬಾವಿ ನಿವಾಸಿ ಯಮನಪ್ಪ ಇಂಗಳಗಿ ಮತ್ತು ದುರ್ಗವ್ವ ದಂಪತಿಯ 17 ವರ್ಷದ ಪುತ್ರ ಜಗದೇಶನ ಶವವನ್ನು ಹೊರ ತೆಗೆದು ಶವ ಪರೀಕ್ಷೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಏಪ್ರಿಲ್ 23ರಂದು ಜಗದೇಶ, ಗ್ರಾಮದ ಹಣಮಂತ ಅವರ ಜಮೀನಿನ ಬಾವಿಗೆ ಈಜಾಡಲು ಹೋಗಿದ್ದ. ಬಾವಿಯಲ್ಲಿ ಈಜುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ. ಆ ಬಳಿಕ ಪೋಷಕರು ಮೃತ ದೇಹವನ್ನು ಹೊಲದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದರು.</p>.<p>ಜುಲೈ 12ರಂದು ಮೃತ ಬಾಲಕನ ತಂದೆ ಯಮನಪ್ಪ ಅವರು ಮಗನ ಸಾವಿನಲ್ಲಿ ಸಂಶಯ ವ್ಯಕ್ತಪಡಿಸಿ, ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಬಾಲಕನ ಪೋಷಕರ ಸಮ್ಮುಖದಲ್ಲಿ ತಹಶೀಲ್ದಾರ್ ಎಂ.ಬಸವರಾಜ ಅವರು ಶವವನ್ನು ಹೊರ ತೆಗೆಸಿ ಶವಪರೀಕ್ಷೆ ನಡೆಸಿದರು. ಈ ವೇಳೆ ಪಿಎಸ್ಐ ರಾಜಶೇಖರ, ವೈದ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ:</strong> ಕಳೆದ ನಾಲ್ಕು ತಿಂಗಳ ಹಿಂದೆ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದ ಬಾಲಕನ ಮೃತದೇಹ ಹೊರ ತೆಗದು ಶವ ಪರೀಕ್ಷೆ ನಡೆಸಿದ ಘಟನೆ ತಾಲ್ಲೂಕಿನ ಜೋಗುಂಡಬಾವಿ ಗ್ರಾಮದಲ್ಲಿ ಬುಧವಾರ ನಡೆದಿದೆ.</p>.<p>ಜೋಗುಂಡಬಾವಿ ನಿವಾಸಿ ಯಮನಪ್ಪ ಇಂಗಳಗಿ ಮತ್ತು ದುರ್ಗವ್ವ ದಂಪತಿಯ 17 ವರ್ಷದ ಪುತ್ರ ಜಗದೇಶನ ಶವವನ್ನು ಹೊರ ತೆಗೆದು ಶವ ಪರೀಕ್ಷೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಏಪ್ರಿಲ್ 23ರಂದು ಜಗದೇಶ, ಗ್ರಾಮದ ಹಣಮಂತ ಅವರ ಜಮೀನಿನ ಬಾವಿಗೆ ಈಜಾಡಲು ಹೋಗಿದ್ದ. ಬಾವಿಯಲ್ಲಿ ಈಜುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ. ಆ ಬಳಿಕ ಪೋಷಕರು ಮೃತ ದೇಹವನ್ನು ಹೊಲದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದರು.</p>.<p>ಜುಲೈ 12ರಂದು ಮೃತ ಬಾಲಕನ ತಂದೆ ಯಮನಪ್ಪ ಅವರು ಮಗನ ಸಾವಿನಲ್ಲಿ ಸಂಶಯ ವ್ಯಕ್ತಪಡಿಸಿ, ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಬಾಲಕನ ಪೋಷಕರ ಸಮ್ಮುಖದಲ್ಲಿ ತಹಶೀಲ್ದಾರ್ ಎಂ.ಬಸವರಾಜ ಅವರು ಶವವನ್ನು ಹೊರ ತೆಗೆಸಿ ಶವಪರೀಕ್ಷೆ ನಡೆಸಿದರು. ಈ ವೇಳೆ ಪಿಎಸ್ಐ ರಾಜಶೇಖರ, ವೈದ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>