‘ಅಂದಿನ ನೀರಾವರಿ ಸಚಿವ ಎಚ್.ಕೆ.ಪಾಟೀಲ ಹಾಗೂ ಮಾಜಿ ಸಚಿವ ಎ.ಬಿ.ಮಾಲಕರಡ್ಡಿಯವರ ಅವಿರತ ಪ್ರಯತ್ನದ ಫಲವಾಗಿ ತಾಲ್ಲೂಕಿನ ಹುರಸಗುಂಡಗಿ ಗ್ರಾಮದ ಬಳಿ ಭೀಮಾ ನದಿಗೆ ಅಡ್ಡಲಾಗಿ ಐತಿಹಾಸಿಕ ಚಂದ್ರಲಾಂಬ ಪರಮೇಶ್ವರಿ ದೇವಸ್ಥಾನದ ಸನ್ನಿಧಿಗೆ ಹೊಂದಿಕೊಂಡಂತೆ ₹200 ಕೋಟಿಗೂ ಅಧಿಕ ವೆಚ್ಚದಲ್ಲಿ ಸನ್ನತಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಗೊಂಡಿತು. ಬ್ಯಾರೇಜಿನ ಉದ್ದ 665 ಮೀಟರ್, 4 ಟಿ.ಎಂ.ಸಿ ಅಡಿ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದೆ. 17,000 ಹೆಕ್ಟೇರ್ ನೀರಾವರಿ ಪ್ರದೇಶಕ್ಕೆ ನೀರುಣಿಸುವ ಯೋಜನೆ ಇದಾಗಿದ್ದು, ಚಿತ್ತಾಪುರ ತಾಲ್ಲೂಕಿನ 8 ಹಾಗೂ ಯಾದಗಿರಿಯ 19 ಗ್ರಾಮಗಳಿಗೆ ನೀರಿನ ಲಭ್ಯವಾಗುತ್ತದೆ. ಈಗ ಭೀಮಾ ನದಿಯ ಹೆಚ್ಚಿನ ನೀರು ಹರಿದು ಬರುತ್ತಿರುವುದರಿಂದ 27 ಗೇಟ್ ಮೂಲಕ ನದಿಗೆ ನೀರು ಹರಿಬಿಡಲಾಗುತ್ತಿದೆ’ ಎಂದು ಅವರು ತಿಳಿಸಿದರು.