<p><strong>ಕೆಂಭಾವಿ:</strong> ಕೆಂಭಾವಿ-ನಗನೂರ ರಸ್ತೆಯಲ್ಲಿರುವ ಪಟ್ಟಣದ ಸಮೀಪದಲ್ಲಿರುವ ದಶಕಗಳ ಹಿಂದೆ ನಿರ್ಮಿಸಲಾಗಿದ್ದ ಸೇತುವೆ ಶಿಥಿಲಾವಸ್ಥೆ ತಲುಪಿದ್ದು, ಸೋಮವಾರ ಪುರಸಭೆ ಅಧ್ಯಕ್ಷ ರಹೆಮಾನ್ ಪಟೇಲ್ ಯಲಗೋಡ ಸೇತುವೆ ಸ್ಥಳ ಪರಿಶೀಲಿಸಿದರು. </p>.<p>ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಸೇತುವೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ಮಳೆ ನೀರು ನಿಲ್ಲುತ್ತಿದೆ. ನೀರು ಸೋರಿಕೆಯಿಂದ ಸೇತುವೆಯ ಶಕ್ತಿ ಕಳೆದುಕೊಂಡಿದೆ. ಡಾಂಬರ್ ಕಿತ್ತು ಹೊಗಿದ್ದು, ಗುಂಡಿಗಳಲ್ಲಿ ನೀರು ನಿಂತು ಮಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಕುರಿತು ಲೋಕೋಪಯೋಗಿ ಅಧಿಕಾರಿಗಳಿಗೆ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ’ ಎಂದು ಆರೋಪಿಸಿದರು.</p>.<p>ಸೇತುವೆ ಪುರಸಭೆ ವ್ಯಾಪ್ತಿಗೆ ಬರುವುದಿಲ್ಲ, ಲೋಕೋಪಯೋಗಿ ಇಲಾಖೆಗೆ ಒಳಪಡುತ್ತದೆ. ಈ ಮಾರ್ಗದಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಸೇತುವೆಯಲ್ಲಿ ದೊಡ್ಡ ರಂದ್ರ ನಿರ್ಮಾಣವಾಗಿದೆ. ಮಳೆಯಿಂದ ಸೇತುವೆ ಕುಸಿದು ಬೀಳುವ ಭೀತಿ ಎದುರಾಗಿದೆ ಎಂದರು.</p>.<p>ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಇನ್ನೂ ಸಾಮಾನ್ಯ ಜನರ ಗತಿಯೇನು? ಎಂದು ಪ್ರಶ್ನಿಸಿದರು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದರು.</p>.<div><blockquote>ಕಳೆದ ವಾರ ‘ಪ್ರಜಾವಾಣಿ’ಯಲ್ಲಿ ಕೆಂಭಾವಿ-ನಗನೂರ ರಸ್ತೆ ಕುರಿತು ಲೇಖನ ಪ್ರಕಟವಾಗಿದ್ದನ್ನು ಗಮನಿಸಿ ಭೇಟಿ ನೀಡಿ ಪರಿಶೀಲಿಸಿದ್ದೇನೆ.</blockquote><span class="attribution">ರಹೆಮಾನ ಪಟೇಲ್ ಯಲಗೋಡ ಪುರಸಭೆ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong> ಕೆಂಭಾವಿ-ನಗನೂರ ರಸ್ತೆಯಲ್ಲಿರುವ ಪಟ್ಟಣದ ಸಮೀಪದಲ್ಲಿರುವ ದಶಕಗಳ ಹಿಂದೆ ನಿರ್ಮಿಸಲಾಗಿದ್ದ ಸೇತುವೆ ಶಿಥಿಲಾವಸ್ಥೆ ತಲುಪಿದ್ದು, ಸೋಮವಾರ ಪುರಸಭೆ ಅಧ್ಯಕ್ಷ ರಹೆಮಾನ್ ಪಟೇಲ್ ಯಲಗೋಡ ಸೇತುವೆ ಸ್ಥಳ ಪರಿಶೀಲಿಸಿದರು. </p>.<p>ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಸೇತುವೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ಮಳೆ ನೀರು ನಿಲ್ಲುತ್ತಿದೆ. ನೀರು ಸೋರಿಕೆಯಿಂದ ಸೇತುವೆಯ ಶಕ್ತಿ ಕಳೆದುಕೊಂಡಿದೆ. ಡಾಂಬರ್ ಕಿತ್ತು ಹೊಗಿದ್ದು, ಗುಂಡಿಗಳಲ್ಲಿ ನೀರು ನಿಂತು ಮಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಕುರಿತು ಲೋಕೋಪಯೋಗಿ ಅಧಿಕಾರಿಗಳಿಗೆ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ’ ಎಂದು ಆರೋಪಿಸಿದರು.</p>.<p>ಸೇತುವೆ ಪುರಸಭೆ ವ್ಯಾಪ್ತಿಗೆ ಬರುವುದಿಲ್ಲ, ಲೋಕೋಪಯೋಗಿ ಇಲಾಖೆಗೆ ಒಳಪಡುತ್ತದೆ. ಈ ಮಾರ್ಗದಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಸೇತುವೆಯಲ್ಲಿ ದೊಡ್ಡ ರಂದ್ರ ನಿರ್ಮಾಣವಾಗಿದೆ. ಮಳೆಯಿಂದ ಸೇತುವೆ ಕುಸಿದು ಬೀಳುವ ಭೀತಿ ಎದುರಾಗಿದೆ ಎಂದರು.</p>.<p>ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಇನ್ನೂ ಸಾಮಾನ್ಯ ಜನರ ಗತಿಯೇನು? ಎಂದು ಪ್ರಶ್ನಿಸಿದರು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದರು.</p>.<div><blockquote>ಕಳೆದ ವಾರ ‘ಪ್ರಜಾವಾಣಿ’ಯಲ್ಲಿ ಕೆಂಭಾವಿ-ನಗನೂರ ರಸ್ತೆ ಕುರಿತು ಲೇಖನ ಪ್ರಕಟವಾಗಿದ್ದನ್ನು ಗಮನಿಸಿ ಭೇಟಿ ನೀಡಿ ಪರಿಶೀಲಿಸಿದ್ದೇನೆ.</blockquote><span class="attribution">ರಹೆಮಾನ ಪಟೇಲ್ ಯಲಗೋಡ ಪುರಸಭೆ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>