ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಪಾಲಿಗೆ ಸತ್ತಂತಿರುವ ಸರ್ಕಾರ, ಶೀಘ್ರವೇ ವಿಧಾನಸೌಧ ಮುಂದೆ ಧರಣಿ: ಯಡಿಯೂರಪ್ಪ

Last Updated 9 ಜೂನ್ 2019, 6:09 IST
ಅಕ್ಷರ ಗಾತ್ರ

ಯಾದಗಿರಿ: ಜನರ ಪಾಲಿಗೆ ರಾಜ್ಯ ಸರ್ಕಾರ ಸತ್ತಾಂಗಿದೆ. ಈ ಸರ್ಕಾರ ಯಾವಾಗ ತೊಲಗುತ್ತದೆ ಎಂದು ಜನತೆ ಎದುರು ನೋಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಯಾದಗಿರಿ ಮತಕ್ಷೇತ್ರದ ಅನವಾರ ಗ್ರಾಮದಲ್ಲಿ ಜನರಿಂದ ಅಹವಾಲು ಆಲಿಸಿ ಮಾತನಾಡಿದರು.

ಗ್ರಾಮದಲ್ಲಿ ಆರು ತಿಂಗಳಿಂದ ಅಂಗವಿಕಲರಿಗೆ, ವೃದ್ಧರಿಗೆ, ವಿಧವಾ ವೇತನ ನೀಡಿಲ್ಲ. ಹೀಗಾಗಿ ಜನರಿಗೆ ಈ ಸರ್ಕಾರ ಇದ್ದು, ಇಲ್ಲದಂತಾಗಿದೆ ಎಂದರು.

ಈ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ. ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಜನರ ತೆರಿಗೆ ಹಣ ಪೋಲಾಗುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ಹಣ ನೀಡಿಲ್ಲ ಎಂದು ದೂರಿದರು.

ವಿಧಾನಸೌಧ ಮುಂದೆ ಧರಣಿ

ಎರಡು ಮೂರು ದಿನಗಳಲ್ಲಿ ವಿಧಾನಸೌಧ ಬಳಿ ಬಿಜೆಪಿ ಸಂಸದರು, ಶಾಸಕರೊಂದಿಗೆ ರಾಜ್ಯ ಸರ್ಕಾರ ವಿರುದ್ಧ ಧರಣಿ ನಡೆಸಲಾಗುವುದು. ತಕ್ಷಣ ರಾಜ್ಯ ಸರ್ಕಾರ ಜನರ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಯಡಿಯೂರಪ್ಪ ಅವರು ಒತ್ತಾಯಿಸಿದರು.

ಒಂದು ವರ್ಷ ಕಳೆದರೂ ಸಾಲ‌ಮನ್ನಾ ಆಗಿಲ್ಲ. ಪಿಂಚಣಿ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಗ್ರಾಮ ವಾಸ್ತವ್ಯ ಗಿಮಿಕ್

ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಹಮ್ಮಿಕೊಂಡಿರುವುದು ಗಿಮಿಕ್ ಆಗಿದೆ. ಅದರ ಬದಲಿಗೆ ಗ್ರಾಮಗಳಿಗೆ ಭೇಟಿ ಅಧಿಕಾರಿಗಳ ಕಿವಿ ಹಿಂಡಿ ಕೆಲಸ ಮಾಡಿಸಿ. ಅದು ಬಿಟ್ಟು ಗ್ರಾಮ ವಾಸ್ತವ್ಯದಿಂದ ಯಾವುದೇ ಪ್ರಯೋಜನವಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT