ಯಾದಗಿರಿ:‘ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಎದುರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಯೂರಿದ್ದಾರೆ. ಅಧಿಕಾರಕ್ಕಾಗಿ ಯಡಿಯೂರಪ್ಪ ಏನು ಬೇಕಾದರೂ ಮಾಡುತ್ತಾರೆ. ಆದರೆ, ಅಭಿವೃದ್ಧಿ ವಿಚಾರದಲ್ಲಿ ಸೇಡಿನ ರಾಜಕಾರಣ ಮಾಡುತ್ತ ಕಾಲಹರಣ ಮಾಡುತ್ತಾರೆ’ ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಆರೋಪಿಸಿದರು.