<p><strong>ಕೆಂಭಾವಿ: </strong>ಮಳೆಯಾಶ್ರಿತ ಪ್ರದೇಶಕ್ಕೆ ಏತ ನೀರಾವರಿ ಮೂಲಕ ನೀರುಣಿಸಬೇಕು ಎಂಬ ರೈತರ ಕೂಗಿಗೆ ಸರ್ಕಾರ ಸ್ಪಂದಿಸಿದ್ದು, ಈ ಭಾಗದ ಜನಪ್ರತಿನಿಧಿಗಳು, ರೈತ ಸಂಘಟನೆಗಳು ಮತ್ತು ಸಂಘ ಸಂಸ್ಥೆಗಳ ಹಲವು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.</p>.<p>ಬೂದಿಹಾಳ- ಪೀರಾಪುರ ಏತ ನೀರಾವರಿಯ ಯೋಜನೆಯ ಮೂಲಕ ನೀರುಣಿಸಲು ಜಲ ಸಂಪನ್ಮೂಲಗಳ ಇಲಾಖೆ ಅನುಮೋದನೆ ನೀಡಿ ಒಟ್ಟು ₹620.33 ಕೋಟಿ ವೆಚ್ಚದ ಯೋಜನೆಗೆ ಸರ್ಕಾರ ಈಚೆಗೆ ಟೆಂಡರ್ ಕರೆದಿದ್ದು, ಈ ಭಾಗದ ರೈತರಲ್ಲಿ ಹರ್ಷ ಮೂಡಿಸಿದೆ. ಕಾಮಗಾರಿ ಪೂರ್ಣಗೊಂಡರೆ ಸುರಪುರ ತಾಲ್ಲೂಕಿನ 18 ಹಾಗೂ ಶಹಾಪುರ ತಾಲೂಕಿನ 13 ಗ್ರಾಮಗಳ ರೈತರಿಗೆ ಅನುಕೂಲವಾಗಲಿದೆ. ಸುಮಾರು 50 ಸಾವಿರ ಎಕರೆ ಕೃಷಿ ಜಮೀನು ಈ ನೀರಾವರಿ ವ್ಯಾಪ್ತಿಗೆ ಒಳಪಡಲಿದೆ.</p>.<p>ಆಲಮಟ್ಟಿ ಜಲಾಶಯದಿಂದ ಶಹಾಪುರ ಹಾಗೂ ಸುರಪುರ ತಾಲ್ಲೂಕಿನ ವ್ಯಾಪ್ತಿಯ ಹಳ್ಳಿಗಳು ನೀರಾವರಿಗೆ ಒಳಪಟ್ಟ ಬೆನ್ನಲ್ಲೇ ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆಯಿಂದ ಮತ್ತಷ್ಟು ಹಳ್ಳಿಗಳು ನೀರಾವರಿ ಆಗುತ್ತವೆ ಎಂದುಕೊಂಡು ದಶಕಗಳ ಹಿಂದೇಯೇ ಹೋರಾಟಗಾರರು ಬೂದಿಹಾಳ- ಪೀರಾಪುರ ಏತ ನೀರಾವರಿ ಹೋರಾಟ ಸಮಿತಿ ರಚಿಸಿಕೊಂಡು ಹೋರಾಟ ನಡೆಸಿದ್ದರು. ಅಂದಿನ ಚುನಾಯಿತ ಪ್ರತಿನಿಧಿಗಳು ಇದಕ್ಕೆ ಸಾಥ್ ನೀಡಿ ಯೋಜನೆಗಳ ಪಟ್ಟಿಯಲ್ಲಿ ಈ ಯೋಜನೆಯನ್ನು ಸೇರ್ಪಡೆ ಮಾಡಿ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಿದ್ದರು.</p>.<p>ಅದರಂತಯೇ ಅಂದಿನ ಮುಖ್ಯ ಎಂಜನಿಯರ್ ಕಚೇರಿಯಿಂದ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಯಿತು. ಹೋರಾಟಗಾರರು ಪ್ರಸ್ತಾವ ಪರಿಶೀಲಿಸಿದ ಬಳಿಕ ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿಗಳು ಮುಖ್ಯ ಎಂಜನಿಯರ್ಗೆ ಪತ್ರ ಬರೆದು, ಶಹಾಪುರ ಹಾಗೂ ಸುರಪುರ ತಾಲ್ಲೂಕಿನ ಮಳೆಯಾಶ್ರಿತ<br />ಪ್ರದೇಶಗಳಿಗೆ ನೀರುಣಿಸಬಹುದು ಎಂದು ವಿವರಿಸಿದ್ದರು.</p>.<p>ಆರಂಭದ ದಿನಗಳಲ್ಲಿ ಸರ್ಕಾರ ನಿರಾಸಕ್ತಿ ತೋರಿದ ಕಾರಣ ಹೋರಾಟಗಾರರಲ್ಲಿ ಆಶಾಭಾವನೆ ಕಮರುವಂತೆ ಮಾಡಿತು. ಆದರೆ ಈ ಭಾಗದ ಶಾಸಕರಾದ ಶರಣಬಸಪ್ಪ ದರ್ಶನಾಪುರ ಮತ್ತು ರಾಜೂಗೌಡ ಅವರು ಸರ್ಕಾರದ ಮೇಲೆ ಬೆಂಬಿಡದೇ ಒತ್ತಡ ಹೇರಿದ್ದರು. ಪರಿಣಾಮ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಯೋಜನೆಗೆ ಹಸಿರು ನಿಶಾನೆ ನೀಡಿದರು ಎಂದು ಸ್ಮರಿಸುತ್ತಾರೆ<br />ಇಲ್ಲಿನ ರೈತರು.</p>.<p>ಆಲಮಟ್ಟಿ ಜಲಾಶಯದಿಂದ ಈ ಭಾಗದ ಕೆರೆ, ಕಟ್ಟೆಗಳನ್ನು ತುಂಬಿಸ ಬೇಕೆಂದು ರೈತರು, ಜನಪ್ರತಿನಿಧಿಗಳು ಸೇರಿದಂತೆ ಹಲವು ರೈತಪರ ಸಂಘಟನೆ ಗಳು ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಕೊನೆಗೂ ಅವರ ಹೋರಾಟಕ್ಕೆ ಈಗ ಫಲ ದೊರೆತಿದೆ.</p>.<p>***</p>.<p>2017ರಿಂದ ಈ ಭಾಗದ ರೈತರು ವಿವಿಧ ಹಂತಗಳಲ್ಲಿ ಈ ಯೋಜನೆ ಜಾರಿಗಾಗಿ ಪ್ರತಿಭಟನೆ ನಡೆಸಿದ್ದು, ಈಗ ನ್ಯಾಯ ಸಿಕ್ಕಿದೆ. ರಾಜ್ಯ ಸರ್ಕಾರ ಈ ಭಾಗದ ರೈತರ ದಶಕಗಳ ಬೇಡಿಕೆಗೆ ಸ್ಪಂದಿಸಿದ್ದು, ಸಂತಸ ತಂದಿದೆ</p>.<p><strong>- ಶರಣಬಸಪ್ಪ ದರ್ಶನಾಪುರ, ಶಾಸಕ</strong></p>.<p>***</p>.<p>ಮಳೆಯಾಶ್ರಿತ ಪ್ರದೇಶವಾಗಿ ರುವುದರಿಂದ ಮಳೆಯಾದರೆ ಬೆಳೆ ಎನ್ನುವಂತೆ ಇತ್ತು. ಆದರೆ ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಯಿಂದ ಈ ಭಾಗದ ರೈತರಿಗೆ ಅನುಕೂಲವಾಗಲಿದೆ</p>.<p><strong>- ಕಾಂತಪ್ಪ ಕುಂಬಾರ, ರೈತ</strong></p>.<p>***</p>.<p>ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಗೆ ಟೆಂಡರ್ ಕರೆದಿದ್ದು ಖುಷಿ ತಂದಿದೆ. ಶೀಘ್ರ ಕಾಮಗಾರಿಗೆ ಚಾಲನೆ ನೀಡಿ, ಯೋಜನೆ ಪೂರ್ಣಗೊಳಿಸಬೇಕು</p>.<p><strong>- ಬಸನಗೌಡ ಚಿಂಚೋಳಿ, ರಾಜ್ಯ ಸಂಘಟನಾ ಕಾರ್ಯದರ್ಶಿ, ರೈತ ಸಂಘ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ: </strong>ಮಳೆಯಾಶ್ರಿತ ಪ್ರದೇಶಕ್ಕೆ ಏತ ನೀರಾವರಿ ಮೂಲಕ ನೀರುಣಿಸಬೇಕು ಎಂಬ ರೈತರ ಕೂಗಿಗೆ ಸರ್ಕಾರ ಸ್ಪಂದಿಸಿದ್ದು, ಈ ಭಾಗದ ಜನಪ್ರತಿನಿಧಿಗಳು, ರೈತ ಸಂಘಟನೆಗಳು ಮತ್ತು ಸಂಘ ಸಂಸ್ಥೆಗಳ ಹಲವು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.</p>.<p>ಬೂದಿಹಾಳ- ಪೀರಾಪುರ ಏತ ನೀರಾವರಿಯ ಯೋಜನೆಯ ಮೂಲಕ ನೀರುಣಿಸಲು ಜಲ ಸಂಪನ್ಮೂಲಗಳ ಇಲಾಖೆ ಅನುಮೋದನೆ ನೀಡಿ ಒಟ್ಟು ₹620.33 ಕೋಟಿ ವೆಚ್ಚದ ಯೋಜನೆಗೆ ಸರ್ಕಾರ ಈಚೆಗೆ ಟೆಂಡರ್ ಕರೆದಿದ್ದು, ಈ ಭಾಗದ ರೈತರಲ್ಲಿ ಹರ್ಷ ಮೂಡಿಸಿದೆ. ಕಾಮಗಾರಿ ಪೂರ್ಣಗೊಂಡರೆ ಸುರಪುರ ತಾಲ್ಲೂಕಿನ 18 ಹಾಗೂ ಶಹಾಪುರ ತಾಲೂಕಿನ 13 ಗ್ರಾಮಗಳ ರೈತರಿಗೆ ಅನುಕೂಲವಾಗಲಿದೆ. ಸುಮಾರು 50 ಸಾವಿರ ಎಕರೆ ಕೃಷಿ ಜಮೀನು ಈ ನೀರಾವರಿ ವ್ಯಾಪ್ತಿಗೆ ಒಳಪಡಲಿದೆ.</p>.<p>ಆಲಮಟ್ಟಿ ಜಲಾಶಯದಿಂದ ಶಹಾಪುರ ಹಾಗೂ ಸುರಪುರ ತಾಲ್ಲೂಕಿನ ವ್ಯಾಪ್ತಿಯ ಹಳ್ಳಿಗಳು ನೀರಾವರಿಗೆ ಒಳಪಟ್ಟ ಬೆನ್ನಲ್ಲೇ ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆಯಿಂದ ಮತ್ತಷ್ಟು ಹಳ್ಳಿಗಳು ನೀರಾವರಿ ಆಗುತ್ತವೆ ಎಂದುಕೊಂಡು ದಶಕಗಳ ಹಿಂದೇಯೇ ಹೋರಾಟಗಾರರು ಬೂದಿಹಾಳ- ಪೀರಾಪುರ ಏತ ನೀರಾವರಿ ಹೋರಾಟ ಸಮಿತಿ ರಚಿಸಿಕೊಂಡು ಹೋರಾಟ ನಡೆಸಿದ್ದರು. ಅಂದಿನ ಚುನಾಯಿತ ಪ್ರತಿನಿಧಿಗಳು ಇದಕ್ಕೆ ಸಾಥ್ ನೀಡಿ ಯೋಜನೆಗಳ ಪಟ್ಟಿಯಲ್ಲಿ ಈ ಯೋಜನೆಯನ್ನು ಸೇರ್ಪಡೆ ಮಾಡಿ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಿದ್ದರು.</p>.<p>ಅದರಂತಯೇ ಅಂದಿನ ಮುಖ್ಯ ಎಂಜನಿಯರ್ ಕಚೇರಿಯಿಂದ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಯಿತು. ಹೋರಾಟಗಾರರು ಪ್ರಸ್ತಾವ ಪರಿಶೀಲಿಸಿದ ಬಳಿಕ ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿಗಳು ಮುಖ್ಯ ಎಂಜನಿಯರ್ಗೆ ಪತ್ರ ಬರೆದು, ಶಹಾಪುರ ಹಾಗೂ ಸುರಪುರ ತಾಲ್ಲೂಕಿನ ಮಳೆಯಾಶ್ರಿತ<br />ಪ್ರದೇಶಗಳಿಗೆ ನೀರುಣಿಸಬಹುದು ಎಂದು ವಿವರಿಸಿದ್ದರು.</p>.<p>ಆರಂಭದ ದಿನಗಳಲ್ಲಿ ಸರ್ಕಾರ ನಿರಾಸಕ್ತಿ ತೋರಿದ ಕಾರಣ ಹೋರಾಟಗಾರರಲ್ಲಿ ಆಶಾಭಾವನೆ ಕಮರುವಂತೆ ಮಾಡಿತು. ಆದರೆ ಈ ಭಾಗದ ಶಾಸಕರಾದ ಶರಣಬಸಪ್ಪ ದರ್ಶನಾಪುರ ಮತ್ತು ರಾಜೂಗೌಡ ಅವರು ಸರ್ಕಾರದ ಮೇಲೆ ಬೆಂಬಿಡದೇ ಒತ್ತಡ ಹೇರಿದ್ದರು. ಪರಿಣಾಮ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಯೋಜನೆಗೆ ಹಸಿರು ನಿಶಾನೆ ನೀಡಿದರು ಎಂದು ಸ್ಮರಿಸುತ್ತಾರೆ<br />ಇಲ್ಲಿನ ರೈತರು.</p>.<p>ಆಲಮಟ್ಟಿ ಜಲಾಶಯದಿಂದ ಈ ಭಾಗದ ಕೆರೆ, ಕಟ್ಟೆಗಳನ್ನು ತುಂಬಿಸ ಬೇಕೆಂದು ರೈತರು, ಜನಪ್ರತಿನಿಧಿಗಳು ಸೇರಿದಂತೆ ಹಲವು ರೈತಪರ ಸಂಘಟನೆ ಗಳು ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಕೊನೆಗೂ ಅವರ ಹೋರಾಟಕ್ಕೆ ಈಗ ಫಲ ದೊರೆತಿದೆ.</p>.<p>***</p>.<p>2017ರಿಂದ ಈ ಭಾಗದ ರೈತರು ವಿವಿಧ ಹಂತಗಳಲ್ಲಿ ಈ ಯೋಜನೆ ಜಾರಿಗಾಗಿ ಪ್ರತಿಭಟನೆ ನಡೆಸಿದ್ದು, ಈಗ ನ್ಯಾಯ ಸಿಕ್ಕಿದೆ. ರಾಜ್ಯ ಸರ್ಕಾರ ಈ ಭಾಗದ ರೈತರ ದಶಕಗಳ ಬೇಡಿಕೆಗೆ ಸ್ಪಂದಿಸಿದ್ದು, ಸಂತಸ ತಂದಿದೆ</p>.<p><strong>- ಶರಣಬಸಪ್ಪ ದರ್ಶನಾಪುರ, ಶಾಸಕ</strong></p>.<p>***</p>.<p>ಮಳೆಯಾಶ್ರಿತ ಪ್ರದೇಶವಾಗಿ ರುವುದರಿಂದ ಮಳೆಯಾದರೆ ಬೆಳೆ ಎನ್ನುವಂತೆ ಇತ್ತು. ಆದರೆ ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಯಿಂದ ಈ ಭಾಗದ ರೈತರಿಗೆ ಅನುಕೂಲವಾಗಲಿದೆ</p>.<p><strong>- ಕಾಂತಪ್ಪ ಕುಂಬಾರ, ರೈತ</strong></p>.<p>***</p>.<p>ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಗೆ ಟೆಂಡರ್ ಕರೆದಿದ್ದು ಖುಷಿ ತಂದಿದೆ. ಶೀಘ್ರ ಕಾಮಗಾರಿಗೆ ಚಾಲನೆ ನೀಡಿ, ಯೋಜನೆ ಪೂರ್ಣಗೊಳಿಸಬೇಕು</p>.<p><strong>- ಬಸನಗೌಡ ಚಿಂಚೋಳಿ, ರಾಜ್ಯ ಸಂಘಟನಾ ಕಾರ್ಯದರ್ಶಿ, ರೈತ ಸಂಘ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>