ಪೊಲೀಸರು ಎರಡೂ ಸಂಘಟನೆಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಗಲಾಟೆಯ ಮಧ್ಯೆಯೇ ಪಾಲಿಕೆ ಕಟ್ಟಡದ ಮೇಲೆ ಕನ್ನಡ, ಇಂಗ್ಲಿಷ್ ಮತ್ತು ಉರ್ದು ನಾಮಫಲಕ ಅಳವಡಿಸಲಾಗಿತ್ತು. ಇದನ್ನು ಖಂಡಿಸಿ ಕನ್ನಡಪರ ಹಾಗೂ ಮುಸ್ಲಿಂ ಸಂಘಟನೆಗಳು ಮತ್ತೆ ಅಹೋರಾತ್ರಿ ಧರಣಿ ನಡೆಸಿದ್ದವು. ಇದಾದ ಬಳಿಕ ವಿವಾದಿತ ನಾಮಫಲಕ ತೆರವುಗೊಳಿಸಲಾಗಿತ್ತು